ಆರಗ ಜ್ಞಾನೇಂದ್ರ ಒಬ್ಬ ಅಸಮರ್ಥ ಗೃಹ ಸಚಿವ : ಸಿದ್ದರಾಮಯ್ಯ – Vishwanews24

Featured, ರಾಜ್ಯ ನ್ಯೂಸ್

ಆರಗ ಜ್ಞಾನೇಂದ್ರ ಒಬ್ಬ ಅಸಮರ್ಥ ಗೃಹ ಸಚಿವ : ಸಿದ್ದರಾಮಯ್ಯ – Vishwanews24

ಬೆಂಗಳೂರು : ಬೆಂಗಳೂರಿನಲ್ಲಿ ಯುವಕ ಚಂದ್ರುನನ್ನು ಉರ್ದು ಮಾತನಾಡದಿದ್ದಕ್ಕೆ ಕೊಲೆ ಮಾಡಲಾಗಿದೆ ಎಂಬ ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಗ ಜ್ಞಾನೇಂದ್ರ ಒಬ್ಬ ಅಸಮರ್ಥ ಗೃಹ ಸಚಿವರು. ಹರ್ಷ ಕೊಲೆ ಪ್ರಕರಣದಲ್ಲೂ ಇದೇ ರೀತಿ ಹೇಳಿಕೆ ನೀಡಿದ್ದರು. ಹರ್ಷ ವಿರುದ್ಧ ಕ್ರಿಮಿನಲ್ ಕೇಸ್ ಇದೆ ಎಂದಿದ್ದರು. ನಂತರ ಕ್ರಿಮಿನಲ್ ಕೇಸ್ ಇಲ್ಲ ಎಂದು ಹೇಳಿದ್ದಾರೆ. ಮೈಸೂರಿನ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಹಾಗೇ ಹೇಳಿಕೆ ನೀಡಿದ್ದರು. ಆಗ ಗೃಹ ಸಚಿವರು ಏನು ಹೇಳಿದ್ದರೆಂದು ಗೊತ್ತಿದೆ. ಇಂತಹವರು ಗೃಹ ಸಚಿವರಾಗಿದ್ದು ನಮ್ಮ ದೌರ್ಭಾಗ್ಯ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ.

ಇನ್ನು ಬೆಂಗಳೂರಿನ ಜೆಜೆ ನಗರ ವ್ಯಾಪ್ತಿಯಲ್ಲಿ ಚಂದ್ರು ಎಂಬ ಯುವಕನ ಕೊಲೆಯಾಗಿದ್ದು, ಯುವಕ ಚಂದ್ರುಗೆ ಉರ್ದು ಮಾತನಾಡಲು ಬರಲ್ಲ ಎನ್ನುವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೆಂದ್ರ ಹೇಳಿಕೆ ನೀಡಿದ್ದರು.

ಉಚ್ಚಿಲ  ಶ್ರೀ ಮಹಾಲಕ್ಷ್ಮೀ ಕ್ಷೇತ್ರ ಬಡವರ ಕಷ್ಟಕ್ಕೆ ಸ್ಪಂದಿಸುವ ದೇವಾಲಯವಾಗಲಿ : ಕೇಮಾರು ಶ್ರೀ – Vishwanews24

Leave a Reply