ಆಸ್ಟಿಯೋಕ್ಲ್ಯಾಟೋಮಾ ಕಾಯಿಲೆಯಿಂದ ಬಳಲುತ್ತಿರುವ ಮಂಡ್ಯ ಮಾಜಿ ಸಂಸದೆ ರಮ್ಯಾ ..

Featured, ರಾಜ್ಯ ನ್ಯೂಸ್, ಸಿನಿಮಾ

ಬೆಂಗಳೂರು: ನಟ ಅಂಬರೀಶ್ ಅಂತಿಮ ದರ್ಶನಕ್ಕೆ ಬಾರದ ಮಾಜಿ ಸಂಸದೆ ರಮ್ಯಾ ವೀರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಆದ್ರೆ ರಮ್ಯಾ ಅನಾರೋಗ್ಯದ ಕಾರಣದಿಂದ ರಮ್ಯಾ ಅವರು ಆಗಮಿಸಿಲ್ಲ ಎಂದು ಅಂದಾಜಿಸಲಾಗಿದೆ.

ರಮ್ಯಾ ಅವರು ಅಕ್ಟೋಬರ್‌ 19 ರಂದು ಇನ್‌ಸ್ಟಾಗ್ರಾಂ ನಲ್ಲಿ  ಕಾಲಿನ ಪಾದಕ್ಕೆ  ಚಿಕಿತ್ಸೆ ಪಡೆದ ಚಿತ್ರವೊಂದನ್ನು  ಪೋಸ್ಟ್‌ ಮಾಡಿ ಅನಾರೋಗ್ಯಕ್ಕೀಡಾದ ಬಗ್ಗೆ ಹೇಳಿಕೊಂಡಿದ್ದರು. ಮೂಳೆಗಳಿಗೆ ಸಂಬಂಧಿಸಿದ ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ನಾನು ಬಳಲುತ್ತಿದ್ದು, ಕೊಂಚ ತಡ ಮಾಡಿದರೆ ಕ್ಯಾನ್ಸರ್‌ಗೆ ಗುರಿಯಾಗಬೇಕಿತ್ತು ಎಂದು ಹೇಳಿಕೊಂಡಿದ್ದರು. 

ಈ ಕಾಯಿಲೆ 10 ಲಕ್ಷ ಮಹಿಳೆಯರಲ್ಲಿ ಒಬ್ಬರಿಗೆ ಕಾಣಿಸಿಕೊಳ್ಳುತ್ತದೆ. ನಿರ್ಲಕ್ಷ್ಯ ವಹಿಸಬೇಡಿ. ಆರೋಗ್ಯದಲ್ಲಿ  ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಿರಿ ಎಂದು ಸಲಹೆ ನೀಡಿದ್ದರು.

ಅಂಬರೀಶ್‌ ಅವರ ನಿಧನದ ಬಳಿಕ ಟ್ವೀಟ್‌ ಮಾಡಿದ್ದ ರಮ್ಯಾ, ‘ಅಂಬರೀಷ್‌ ಅಂಕಲ್‌ ಅವರು ಹೊರಟು ಹೋದ  ಬಗ್ಗೆ ಕೇಳಿ ತುಂಬಾ ದುಃಖಿತಳಾಗಿದ್ದೇನೆ. ಅವರ ಆತ್ಮಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪ. ಅವರನ್ನು ಯಾವಾಗಲೂ ಪ್ರೀತಿಯಿಂದ ನೆನಪಿಟ್ಟುಕೊಳ್ಳುತ್ತೇನೆ’. ಎಂದು ಬರೆದಿದ್ದರು.

ಮಂಡ್ಯದಲ್ಲಿ 2013ರಲ್ಲಿ ನಡೆದ ಲೋಕಸಭಾ ಉಪ ಚುನಾವಣೆಗೆ ರಮ್ಯಾ ಕಾಂಗ್ರೆಸ್‌ ಅಭ್ಯರ್ಥಿ ಯಾಗಲು ಅಂಬರೀಷ್‌ ಅವರೇ ಕಾರಣ. ಅಲ್ಲದೆ, ರಮ್ಯಾ ಗೆಲುವಿನಲ್ಲೂ ಪ್ರಮುಖ ಪಾತ್ರ ವಹಿಸಿದ್ದರು.