ಇಂಟರ್ ಶಿಫ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ ; ಇದು ನನ್ನ ವಿರುದ್ಧದ ಷಡ್ಯಂತ್ರ :ವಕೀಲ ಕೆ ಎಸ್ ಎನ್ ರಾಜೇಶ್ ಭಟ್ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಇಂಟರ್ ಶಿಫ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ ; ಇದು ನನ್ನ ವಿರುದ್ಧದ ಷಡ್ಯಂತ್ರ : ವಕೀಲ ಕೆ ಎಸ್ ಎನ್ ರಾಜೇಶ್ ಭಟ್ – Vishwanews24

ಮಂಗಳೂರು: ಇಂಟರ್ ಶಿಫ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಸಂಬಂಧ, ಇದೀಗ ನಗರ ಖ್ಯಾತ ವಕೀಲ ಕೆ ಎಸ್ ಎನ್ ರಾಜೇಶ್ ಭಟ್ ವಿರುದ್ಧ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಸಂತ್ರಸ್ತೆಯ ದೂರಿನ ಹಿನ್ನಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಈ ಕುರಿತಂತೆ ವೀಡಿಯೋ ಬಿಡುಗಡೆ ಮಾಡಿರುವಂತ ಅವರು, ಇದು ತಮ್ಮ ವಿರುದ್ಧದ ಷಡ್ಯಂತ್ರವಾಗಿದೆ. ಸೆಪ್ಟೆಂಬರ್ 25ರಂದು ನಡೆದಂತ ಘಟನೆ ಇದಾಗಿದ್ದು, ಸೆಪ್ಟೆಂಬರ್ 27ರಂದೇ, ಇಬ್ಬರು ಯುವತಿಯರು ಹಣಕ್ಕಾಗಿ ಬೇಡಿಕೆ ಇಟ್ಟ ಕುರಿತಂತೆ ಪೊಲೀಸ್ ಠಾಣೆಗೆ ದೂರು ನೀಡಿದ್ದೆನು. ಆದ್ರೇ ಇದುವರೆಗೆ ಪ್ರಕರಣ ದಾಖಲಿಸಿಲ್ಲ ಎಂದು ತಿಳಿಸಿದರು.

ಇನ್ನೂ ಈ ಪ್ರಕರಣ ಸಂಬಂಧ ಮಾತನಾಡಿದಂತ ಪೊಲೀಸ್ ಆಯುಕ್ತ ಶಶಿಕುಮಾರ್, ಇಂಟರ್ ಶಿಪ್ ವಿದ್ಯಾರ್ಥಿನಿ ತಮ್ಮ ಜೊತೆಗೆ ವಕೀಲ ರಾಜೇಶ್ ಭಟ್ ಅನುಚಿತವಾಗಿ ವರ್ತಿಸಿದ್ದಾರೆ ಎಂಬುದಾಗಿ ದೂರು ನೀಡಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪ್ರಕರಣ ಸಂಬಂಧ ಸಮಗ್ರ ತನಿಖೆ ನಡೆಸಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸೋದಾಗಿ ತಿಳಿಸಿದ್ದಾರೆ.

ಮಂಗಳೂರು: ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ರಾಜೇಂದ್ರ ಸೂಚನೆ – Vishwanews24