ಇಂದಿನಿಂದ ದಕ್ಷಿಣ ಕನ್ನಡದಲ್ಲಿ ಬಸ್ ಸಂಚಾರ ಆರಂಭ ; ಮಧ್ಯಾಹ್ನ 1 ಗಂಟೆಯವರೆಗೆ ಸಂಚಾರಕ್ಕೆ ಅನುಮತಿ -Vishwanews24
ಇಂದಿನಿಂದ ದಕ್ಷಿಣ ಕನ್ನಡದಲ್ಲಿ ಬಸ್ ಸಂಚಾರ ಆರಂಭ ; ಮಧ್ಯಾಹ್ನ 1 ಗಂಟೆಯವರೆಗೆ ಸಂಚಾರಕ್ಕೆ ಅನುಮತಿ -Vishwanews24
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾದ್ಯಂತ ಬೆಳಿಗ್ಗೆ 07 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರ ಉಪಯೋಗಕ್ಕಾಗಿ ಮಧ್ಯಾಹ್ನ 01 ಗಂಟೆಯವರೆಗೆ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ ವೀಕೆಂಡ್ ಕರ್ಫ್ಯೂ ಇರಲಿದ್ದು, ಉಳಿದ ದಿನಗಳಲ್ಲಿ ಮೇಲಿನ ಆದೇಶ ಅನ್ವಯವಾಗಲಿದೆ. ಅಂಗಡಿ ಮುಂಗಟ್ಟು ಮತ್ತಿತರ ವಾಣಿಜ್ಯ ಚಟುವಟಿಕೆಯ ಉದ್ದೇಶಗಳಿಗೆ/ಕೇಂದ್ರಗಳಿಗೆ 18 ವರ್ಷದೊಳಗಿನವರನ್ನು ಕರೆದೊಯ್ಯುವುದನ್ನು ನಿರ್ಬಂಧಿಸಲಾಗಿದೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಹೊಟೇಲ್ಗಳನ್ನು ಕೂಡ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಹೊಟೇಲ್ ಮತ್ತು ಬಸ್ ಗಳಲ್ಲಿ ಒಟ್ಟು ಆಸನ ಸಾಮರ್ಥ್ಯದ ಶೇ.50ರಷ್ಟನ್ನು ಮೀರುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
