ಇಂದು ಅಯೋಧ್ಯೆ ರಾಮಮಂದಿರ ಗರ್ಭಗುಡಿಗೆ ಸಿಎಂ ಯೋಗಿ ಆದಿತ್ಯನಾಥ್ ಶಂಕುಸ್ಥಾಪನೆ – Vishwanews24

Featured, ರಾಷ್ಟ್ರ ನ್ಯೂಸ್

ಇಂದು ಅಯೋಧ್ಯೆ ರಾಮಮಂದಿರ ಗರ್ಭಗುಡಿಗೆ ಸಿಎಂ ಯೋಗಿ ಆದಿತ್ಯನಾಥ್ ಶಂಕುಸ್ಥಾಪನೆ – Vishwanews24

ಲಕ್ನೋ: ಅಯೋಧ್ಯೆಯ ರಾಮಮಂದಿರ ಗರ್ಭಗುಡಿಗೆ ಸಿಎಂ ಯೋಗಿ ಆದಿತ್ಯನಾಥ್ ಇವತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.

ಈ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಟ್ರಸ್ಟ್‌ ಧರ್ಮದರ್ಶಿಗಳಾದ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀ ಕೂಡ ಭಾಗಿಯಾಗಲಿದ್ದಾರೆ.

ಮಂದಿರ ನಿರ್ಮಾಣದ ಹೊಣೆ ಹೊತ್ತ ರಾಮಜನ್ಮ ಭೂಮಿ ಟ್ರಸ್ಟ್, ದೇವಾಲಯದ ಗರ್ಭಗುಡಿಯನ್ನು ರಾಜಸ್ಥಾನದ ಮಖ್ರಾನ ಬೆಟ್ಟದಿಂದ ತರಿಸಲಾದ ಬಿಳಿ ಅಮೃತಶಿಲೆಯಿಂದ ನಿರ್ಮಿಸುತ್ತಿದೆ. ಸುಮಾರು 13,300 ಕ್ಯೂಬಿಕ್ ಅಡಿ ಅಮೃತ ಶಿಲೆ ಬಳಸುವುದಾಗಿ ಟ್ರಸ್ಟ್ ಹೇಳಿದೆ.

ಪ್ರಗತಿ ವರದಿಯನ್ನು ಹಂಚಿಕೊಂಡ ಎಸ್‌ಆರ್‌ಜೆಬಿಟಿಕೆ ಅಡಿಪಾಯ ಹಾಕಲಾಗಿದ್ದು, ಈ ವರ್ಷದ ಜನವರಿ 24 ರಂದು ಪ್ರಾರಂಭವಾದ ಸ್ತಂಭ ಅಥವಾ ಪೀಠ ಎತ್ತುವ ಕೆಲಸ ನಡೆಯುತ್ತಿದೆ. ಡಿಸೆಂಬರ್ 2023 ರ ವೇಳೆಗೆ, ರಾಮನ ವಿಗ್ರಹವನ್ನು ಹೊಂದಿರುವ ದೇವಾಲಯದ ಗರ್ಭಗುಡಿ ಪೂಜೆಗೆ ಸಿದ್ಧವಾಗಲಿದೆ. ಎಂದರು.

ವೇದಿಕೆಯಲ್ಲಿ ಹಾಡುತ್ತಿದ್ದಾಗಲೇ ಹೃದಯಾಘಾತ : ಬಾಲಿವುಡ್‌ ಖ್ಯಾತ ಸಂಗೀತಾಗಾರ ಕೆಕೆ ನಿಧನ – Vishwanews24

Leave a Reply