ಇತರರಿಗೆ ಮಾದರಿಯಾಗುವ ಬದುಕು ನಮ್ಮದಾಗಬೇಕು : ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ -Vishwanews24

Featured, ರಾಜ್ಯ ನ್ಯೂಸ್

ಇತರರಿಗೆ ಮಾದರಿಯಾಗುವ ಬದುಕು ನಮ್ಮದಾಗಬೇಕು : ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ -Vishwanews24

ಗೋಕಾಕ: ‘ಅಸಾಧ್ಯವಾದುದು ಯಾವುದೂ ಇಲ್ಲ. ಛಲ ಇರಬೇಕು. ಇತರರಿಗೆ ಮಾದರಿಯಾಗುವ ಬದುಕು ನಮ್ಮದಾಗಬೇಕು’ ಎಂದು ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಹೇಳಿದರು.

ಇಲ್ಲಿನ ಚನ್ನಬಸವೇಶ್ವರ ವಿದ್ಯಾಪೀಠದ ಆವರಣದಲ್ಲಿ ಶೂನ್ಯ ಸಂಪಾದನಮಠದ 16ನೇ ಶರಣ ಸಂಸ್ಕೃತಿ ಉತ್ಸವ ಅಂಗವಾಗಿ ಸೋಮವಾರ ಆಯೋಜಿಸಿದ್ದ ಯುವ ಸಮಾವೇಶದಲ್ಲಿ ಅವರು ಮಾತನಾಡಿದರು.

ಬಾರ್ಕೂರು: ಆರ್‌ಟಿಐ ಕಾರ್ಯಕರ್ತ ಹಲ್ಲೆ ಪ್ರಕರಣ : ಆರೋಪಗಳನ್ನು ಬಂಧಿಸದಿದ್ದರೆ ತೀವ್ರ ಪ್ರತಿಭಟನೆ : ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ -Vishwanews24

‘ಯುವ ಜನತೆಗೆ ಜ್ಞಾನಾರ್ಜನೆ ಮುಖ್ಯವಾಗಿದೆ. ಅದಕ್ಕೆ ಎಲ್ಲಕ್ಕೂ ಮಿಗಿಲಾದ ಆದ್ಯತೆಯನ್ನು ನೀಡಿದಾಗ ಮಾತ್ರ ಅದನ್ನು ಸಂಪಾದಿಸಲು ಸಾಧ್ಯ. ನನ್ನಿಂದ ಏನೂ ಆಗುವುದಿಲ್ಲ ಎಂಬ ತಾತ್ಸಾರ ಮನೋಭಾವ ಬರಬಾರದು. ಎಲ್ಲವೂ ಸಾಧ್ಯವೆಂಬ ಮಹದಾಸೆ ಇರಬೇಕು. ಮನುಷ್ಯನ್ನು ಸೋಲಿಸುವ ವಸ್ತು ಈ ಜಗತ್ತಿನಲ್ಲಿ ಇಲ್ಲ. ಪ್ರಯತ್ನ ಮಾಡಿದರೆ ಏನು ಬೇಕಾದರೂ ಸಾಧಿಸಬಹುದು’ ಎಂದು ತಿಳಿಸಿದರು.

ಸಂಸದ ಪ್ರತಾಪ್ ಸಿಂಹ ವಿರುದ್ದ ಶಿಲುಬೆಗಳನ್ನು ಹಿಡಿದು ಧರಣಿ ಸತ್ಯಾಗ್ರಹ ನಡೆಸಿದ ಕ್ರಿಶ್ಚಿಯನ್ ಪೊಲಿಟಿಕಲ್ ಲೀಡರ್ಸ್ ಫೋರಂನ ಕಾರ್ಯಕರ್ತರು -Vishwanews24

‘ಯುವಜನರು ಮೊಬೈಲ್ ಫೋನ್, ಸಾಮಾಜಿಕ ಜಾಲತಾಣವನ್ನು ಅನವಶ್ಯವಾಗಿ ಬಳಸುವುದರಿಂದ ಅಂತರ ಕಾಯ್ದುಕೊಳ್ಳುವುದು ಇಂದಿನ ಅಗತ್ಯವಾಗಿದೆ’ ಎಂದರು.

ವಿವೇಕ ಜತ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಎಸ್.ಕೆ. ಮಠದ ನಿರೂಪಿಸಿದರು. ಶಿಕ್ಷಕ ರಾಮಪ್ಪ ಮಿರ್ಜಿ ವಂದಿಸಿದರು.

ಟೂಲ್‌ ಕಿಟ್‌ ಪ್ರಕರಣ : ನಿಖಿತಾ ಜಾಕೋಬ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್ -Vishwanews24