ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ : ಕೆ.ಎಸ್.ಈಶ್ವರಪ್ಪ -Vishwanews24

Featured, ರಾಜ್ಯ ನ್ಯೂಸ್

ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ : ಕೆ.ಎಸ್.ಈಶ್ವರಪ್ಪ -Vishwanews24

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಜಾತಿಗೊಬ್ಬರಂತೆ ಮುಖ್ಯಮಂತ್ರಿ ಆಕಾಂಕ್ಷಿಗಳಾಗಿದ್ದಾರೆ. ಆದರೆ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ಸಚಿವ ಕೆ.ಎಸ್.ಈಶ್ವರಪ್ಪ ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಪರಮೇಶ್ವರ್, ಎಂ.ಬಿ.ಪಾಟೀಲ್, ತನ್ವೀರ್ ಸೇಠ್ ಹೀಗೆ ಹಲವರು ಮುಖ್ಯಮಂತ್ರಿ ಕನಸು ಕಾಣುತ್ತಿದ್ದಾರೆ. ಆದರೆ ಕಾಂಗ್ರೆಸ್ ದೇಶದಲ್ಲಿ ಎಲ್ಲಿದೆ ಎಂದು ಹುಡುಕುವಂತಾಗಿದೆ ಎಂದು ಟೀಕಿಸಿದರು.