ಈ ಬಾರಿ ಏನೇ ಪ್ರಯತ್ನ ಮಾಡಿದರೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ, ಸೋಲುವ ಭಯ ಉಂಟಾಗಿದೆ : ಸಿದ್ದರಾಮಯ್ಯ – Vishwanews24

Featured, ರಾಜ್ಯ ನ್ಯೂಸ್

ರಾಜ್ಯದಲ್ಲಿ ಭ್ರಷ್ಟಾಚಾರ, ದುರಾಡಳಿತದಿಂದಾಗಿ ಬಿಜೆಪಿಗೆ ಈ ಬಾರಿ ಚುನಾವಣೆಯಲ್ಲಿ ಸೋಲುವ ಭಯ ಉಂಟಾಗಿದೆ : ಸಿದ್ದರಾಮಯ್ಯ

ಕಲಬುರಗಿ: ರಾಜ್ಯದಲ್ಲಿ ಭ್ರಷ್ಟಾಚಾರ, ದುರಾಡಳಿತದಿಂದಾಗಿ ಬಿಜೆಪಿಗೆ ಈ ಬಾರಿ ಚುನಾವಣೆಯಲ್ಲಿ ಸೋಲುವ ಭಯ ಉಂಟಾಗಿದೆ. ಅದ್ದರಿಂದಲೇ ರಾಜ್ಯದ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ ಬರುತ್ತಿದ್ದಾರೆ‌ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಈ ಬಾರಿ ಏನೇ ಪ್ರಯತ್ನ ಮಾಡಿದರೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಸೋಲಿನ ಭಯ ಕಾಡುತ್ತಿರುವುದು ಕಾಂಗ್ರೆಸ್ಸಿಗಲ್ಲ, ಬಿಜೆಪಿಗೆ ಎಂದರು.

ಐದು ವರ್ಷಗಳಲ್ಲಿ ಬಡವರಿಗೆ ಒಂದಾದರೂ ಮನೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.

224 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಬೇಕಿರುವುದರಿಂದ ನಾನು ಉತ್ತರ ಕರ್ನಾಟಕದಲ್ಲಿ, ಪಕ್ಷದ ಅಧ್ಯಕ್ಷ ‌ಡಿ.ಕೆ. ಶಿವಕುಮಾರ್ ಅವರು ದಕ್ಷಿಣ ಕರ್ನಾಟಕದಲ್ಲಿ ಸಂಚರಿಸಿ ಪಕ್ಷವನ್ನು ಸಂಘಟಿಸಲಿದ್ದೇವೆ.‌ ಸಾಮೂಹಿಕವಾಗಿ ಎಲ್ಲ ಮುಖಂಡರನ್ನು ಒಳಗೊಂಡು ಸಂಚಾರ ನಡೆಸಲಿದ್ದೇವೆ ಎಂದರು.

ಉಡುಪಿಯಲ್ಲಿ ಅಮಾನವೀಯ ಘಟನೆ ; ವಿದ್ಯಾರ್ಥಿನಿಯೊಬ್ಬಳು ನಾಯಿ ಜೊತೆ ಆಟವಾಡುತ್ತಾಳೆ ಎಂದು ನಾಯಿಯನ್ನೇ ಕೊಂದು ವಿಕೃತಿ ಮೆರೆದ ಕಾಲೇಜು ವಾರ್ಡನ್​ – Vishwanews24

ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ ಶಿವಕುಮಾರ್ ಮಾತನಾಡಿ, ಬಿಜೆಪಿ ರಾಜ್ಯದಲ್ಲಿ ಈ ಬಾರಿ ಸೋಲುವುದು ಖಚಿತ. ಜನ ಚುನಾವಣೆ ಬರುವುದನ್ನೇ ಕಾಯುತ್ತಿದ್ದಾರೆ. ಈ ಬಾರಿ ತಕ್ಕ ಪಾಠ ಕಲಿಸಲಿದ್ದಾರೆ.

ಬಿಜೆಪಿಯವರು ಪಿಎಸ್ಐ ಹಗರಣದಲ್ಲಿ ಅಕ್ರಮವಾಗಿ ಎಷ್ಟು ಲೂಟಿ ಮಾಡಿದ್ದಾರೆ. ಅಂಕಗಳನ್ನು ಹೇಗೆ ತಿದ್ದಿದ್ದಾರೆ ಎಂಬುದನ್ನು ‘ಪ್ರಜಾವಾಣಿ’ ಎಳೆ ಎಳೆಯಾಗಿ ಬಿಚ್ಚಿಟ್ಟಿದೆ ಎಂದರು.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಉಪಾಧ್ಯಕ್ಷ ಡಾ.ಶರಣಪ್ರಕಾಶ ಪಾಟೀಲ, ವಕ್ತಾರ ಪ್ರಿಯಾಂಕ್ ಖರ್ಗೆ ಇದ್ದರು.

ಉಡುಪಿಯಲ್ಲಿ ಅಮಾನವೀಯ ಘಟನೆ ; ವಿದ್ಯಾರ್ಥಿನಿಯೊಬ್ಬಳು ನಾಯಿ ಜೊತೆ ಆಟವಾಡುತ್ತಾಳೆ ಎಂದು ನಾಯಿಯನ್ನೇ ಕೊಂದು ವಿಕೃತಿ ಮೆರೆದ ಕಾಲೇಜು ವಾರ್ಡನ್​ – Vishwanews24

Leave a Reply