ಈ ಬಾರಿ ನಾನು `ಕಿಂಗ್’ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ : ಕುಮಾರಸ್ವಾಮಿ  – Vishwanews24

Featured, ರಾಜ್ಯ ನ್ಯೂಸ್

ಈ ಬಾರಿ ನಾನು `ಕಿಂಗ್’ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ : ಕುಮಾರಸ್ವಾಮಿ 

ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ಬಯಕೆ ವಿಚಾರದ ಕುರಿತಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ನಾನು ಕಿಂಗ್ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ.

ಹಾಸನ ಟಿಕೆಟ್ ವಿಚಾರದಲ್ಲಿ ಅನಿತಾ ಕುಮಾರಸ್ವಾಮಿ ಎಳೆದು ತರಬೇಡಿ. ಅನಿತಾ ಕುಮಾರಸ್ವಾಮಿ ರಾಜಕೀಯ ಮಾಡಿ ಸಾಧಿಸೋದು ಏನೂ ಇಲ್ಲ ಎಂದರು.

ಕೆಲವು ಕಾರಣಗಳಿಂದ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬವಾಗಿದೆ. ಇನ್ನೆರಡು ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ. ಅಭ್ಯರ್ಥಿಗಳ ವಿಚಾರದಲ್ಲಿ ಚರ್ಚೆ ಮಾಡಿ ಫೈನಲ್ ಮಾಡಿದ್ದೇನೆ. ಜೆಡಿಎಸ್ ಅಭ್ಯರ್ಥಿಗಳ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ವಿಚಾರವಾಗಿ ಗೊಂದಲವಿಲ್ಲ ಎಂದು ಹೇಳಿದ್ದಾರೆ.

ಉಳ್ಳಾಲ: ಫ್ಲೈಓವರ್ ಮೇಲೆ ಬಿದ್ದ ಬೃಹತ್ ಗಾತ್ರದ ಪೈಪ್ – ತಪ್ಪಿದ ಅನಾಹುತ  – Vishwanews24

Leave a Reply