ಈ ಬಾರಿ ಸರಳವಾಗಿ ಸ್ವಾತಂತ್ರೋತ್ಸವ ಆಚರಣೆ : ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ -Vishwanews24
ನವದೆಹಲಿ: ಈ ಬಾರಿ ಸ್ವಾತಂತ್ರ್ಯೋತ್ಸವ ಎಂದಿನಂತೆ ಅದ್ದೂರಿಯಾಗಿ ಇರುವುದಿಲ್ಲ. ಇಡೀ ವಿಶ್ವ ಕೊರೊನಾದಿಂದ ತತ್ತರಿಸಿದ ಹಿನ್ನೆಲೆಯಲ್ಲಿ ಸರಳವಾಗಿ ಸ್ವಾತಂತ್ರೋತ್ಸವ ಆಚರಿಸಲಾಗುತ್ತಿದೆ ಎಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಹೇಳಿದ್ದಾರೆ.
74 ನೇ ಸ್ವಾತಂತ್ರೋತ್ಸವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ.
ಈ ಬಾರಿ ಸ್ವಾತಂತ್ರ್ಯೋತ್ಸವ ಅದ್ದೂರಿಯಾಗಿ ಇರುವುದಿಲ್ಲ. ಇಡೀ ವಿಶ್ವ ಕೊರೊನಾದಿಂದ ತತ್ತರಿಸಿದ ಹಿನ್ನೆಲೆಯಲ್ಲಿ ಸರಳವಾಗಿ ಸ್ವಾತಂತ್ರೋತ್ಸವ ಆಚರಿಸಲಾಗುತ್ತಿದೆ., ಕೊರೋನಾ ವಾರಿಯರ್ಸ್ ದೇಶದ ಜನತೆಯ ಸೇವೆಯಲ್ಲಿ ನಿರತರಾಗಿದ್ದಾರೆ ಎಂದು ಹೇಳಿದ್ದಾರೆ.
ಆತ್ಮ ನಿರ್ಭರ ಭಾರತ ಅಭಿಯಾನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದಾರೆ. ಈ ಅಭಿಯಾನ ಜಗತ್ತಿನಿಂದ ಭಾರತವನ್ನು ದೂರ ಮಾಡದೇ ಎಲ್ಲರೊಂದಿಗೆ ಬೆರೆತುಕೊಂಡು ಭಾರತವನ್ನು ಸ್ವಾವಲಂಬಿ ಮತ್ತು ಸ್ವಾಭಿಮಾನಿಯನ್ನಾಗಿಸುವ ಪ್ರಯತ್ನವಾಗಿದೆ ಎಂದರು. ವಂದೇ ಭಾರತ್ ಮಿಷನ್ ಅಡಿ ವಿದೇಶಗಳಲ್ಲಿರುವ ಭಾರತೀಯರು ವಾಪಸ್ ಬರಲು ವ್ಯವಸ್ಥೆ ಮಾಡಲಾಗಿದೆ. ವಿದೇಶಗಳಲ್ಲಿರುವ 10 ಲಕ್ಷ ಭಾರತೀಯರು ವಾಪಸ್ ಬಂದಿದ್ದಾರೆ ಎಂದರು.
