ಈವೆಂಟ್​ ಮ್ಯಾನೇಜ್ಮೆಂಟ್​​ ಹೆಸರಿನಲ್ಲಿ ಹೈಟೆಕ್​ ವೇಶ್ಯಾವಾಟಿಕೆ ದಂಧೆ : ದಂಪತಿ ಅರೆಸ್ಟ್ – vishwanews24

Featured, ರಾಜ್ಯ ನ್ಯೂಸ್

ಈವೆಂಟ್​ ಮ್ಯಾನೇಜ್ಮೆಂಟ್​​ ಹೆಸರಿನಲ್ಲಿ ಹೈಟೆಕ್​ ವೇಶ್ಯಾವಾಟಿಕೆ ದಂಧೆ : ದಂಪತಿ ಅರೆಸ್ಟ್

ಬೆಂಗಳೂರು: ಈವೆಂಟ್​ ಮ್ಯಾನೇಜ್ಮೆಂಟ್​​ ಹೆಸರಿನಲ್ಲಿ ಹೈಟೆಕ್​ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿಯನ್ನು ಬೆಂಗಳೂರಿನಲ್ಲಿ ಸಿಸಿಬಿ‌ ಪೊಲೀಸರು  ಬಂಧಿಸಿದ್ದಾರೆ. ಬಂಧಿತ ಪ್ರಕಾಶ್, ಪಾರಿಜಾತ ದಂಪತಿ ಪಟ್ಟೆಗಾರಪಾಳ್ಯ ನಿವಾಸಿಗಳು. ಇವರು ರಾಕೇಶ್, ಪೂಜಾ ಎಂದು ಹೆಸರು ಬದಲಿಸಿಕೊಂಡು ದಂಧೆ ನಡೆಸ್ತಿದ್ರು. ಸದ್ಯ ಇಬ್ಬರನ್ನೂ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಆರೋಪಿಗಳು, ಉದ್ಯೋಗ ಕೊಡಿಸುವ ನೆಪದಲ್ಲಿ ಬಡ ಹೆಣ್ಣುಮಕ್ಕಳನ್ನೇ ಟಾರ್ಗೆಟ್ ಮಾ​ಡುತ್ತಿದ್ದರು. ಉತ್ತರ ಕರ್ನಾಟಕ ಭಾಗದ ಬಡ ಹೆಣ್ಣುಮಕ್ಕಳನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಕೆಲಸ ಕೊಡಿಸದೇ ಹಣದ ಆಮಿಷ ತೋರಿಸ್ತಿದ್ರು. ಬಳಿಕ ವೇಶ್ಯಾವಾಟಿಕೆ ಅಡ್ಡೆಗೆ ದೂಡುತ್ತಿದ್ದರು. ಆರೋಪಿ ಪ್ರಕಾಶ್, ಪಾರಿಜಾತ ದಂಪತಿ ಕರ್ನಾಟಕದ ಹೆಣ್ಣುಮಕ್ಕಳನ್ನು ಕರೆದೊಯ್ದು ತಮಿಳುನಾಡು, ಪಾಂಡಿಚೇರಿ ರೆಸಾರ್ಟ್​ಗಳಲ್ಲಿ ದಂಧೆ ನಡೆಸ್ತಿದ್ದರು. ಮದುವೆ ಈವೆಂಟ್​ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ಪ್ರತಿ ವಾರಕ್ಕೊಮ್ಮೆ ಬೆಂಗಳೂರಿನಿಂದ ತಮಿಳುನಾಡಿಗೆ ಕರೆದೊಯ್ದು ದಂಧೆ ನಡೆಸುತ್ತಿದ್ದರು.

ಪಡುಬಿದ್ರಿ: ನವರಾತ್ರಿಯ ಹಿನ್ನೆಲೆ ರೇಣುಕಾ ಸ್ವಾಮಿ ಹಾಗೂ ಯಮರಾಜನ ವೇಷ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ – vishwanews24

ಹೊರ ರಾಜ್ಯದ ಶ್ರೀಮಂತರು, ಉದ್ಯಮಿಗಳು, ರೆಸಾರ್ಟ್​ಗಳಿಗೆ ಭೇಟಿ ನೀಡ್ತಿದ್ದವರ ಬಳಿ ಈ ಅಮಾಯಕ ಹೆಣ್ಣುಮಕ್ಕಳನ್ನು ದೂಡುತ್ತಿದ್ದರು. ಅಷ್ಟೇ ಅಲ್ಲದೆ ಐಷಾರಾಮಿ ವೇಶ್ಯಾವಾಟಿಕೆ ಪಾರ್ಟಿಯಲ್ಲಿ ಈ ದಂಪತಿ ಮದ್ಯ ಒದಗಿಸುತ್ತಿದ್ದರು. ಪಾರ್ಟಿಗೆ ಬರುವ ಒಬ್ಬರಿಗೆ ತಲಾ 25,000 ದಿಂದ 50 ಸಾವಿರದವರೆಗೂ ನಿಗದಿ ಮಾಡಲಾಗುತ್ತಿತ್ತು. ಬೆಂಗಳೂರಿನಿಂದ ಯುವತಿಯರನ್ನು ಕರೆದೊಯ್ಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ದಾಳಿ ನಡೆಸಿದ್ದು ಸದ್ಯ ನಾಲ್ವರು ಯುವತಿಯರ ರಕ್ಷಣೆ ಮಾಡಲಾಗಿದೆ. ಹಾಗೂ ಆರೋಪಿ ದಂಪತಿಯನ್ನು ಬಂಧಿಸಲಾಗಿದೆ.

ಬೆಳ್ತಂಗಡಿ: ಹೃದಯಾಘಾತದಿಂದ ಯುವಕ ನಿಧನ – vishwanews24

Leave a Reply