ಉಚಿತ ಲಸಿಕೆ, ಇತರ ಯೋಜನೆಗಳಿಗೆ ಇಂಧನದ ಮೇಲಿನ ತೆರಿಗೆ ಹಣ ಬಳಕೆ : ಹರ್‌ದೀಪ್‌‌ ಸಿಂಗ್‌ ಪುರಿ – Vishwanews24

Featured, ರಾಷ್ಟ್ರ ನ್ಯೂಸ್

ಉಚಿತ ಲಸಿಕೆ, ಇತರ ಯೋಜನೆಗಳಿಗೆ ಇಂಧನದ ಮೇಲಿನ ತೆರಿಗೆ ಹಣ ಬಳಕೆ : ಹರ್‌ದೀಪ್‌‌ ಸಿಂಗ್‌ ಪುರಿ – Vishwanews24

ನವದೆಹಲಿ: “ಉಚಿತ ಲಸಿಕೆ ಸೇರಿದಂತೆ ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವವರಿಗೆ ಉಚಿತ ಊಟ, ಅಡುಗೆ ಅನಿಲ ಹಾಗೂ ಇತರ ಯೋಜನೆಗಳಿಗಾಗಿ ಇಂಧನದ ಮೇಲೆ ವಿಧಿಸಿರುವ ತೆರಿಗೆಯಿಂದ ಸಂಗ್ರಹವಾಗುವ ಹಣವನ್ನು ಬಳಸಿಕೊಳ್ಳಲಾಗುತ್ತಿದೆ” ಎಂದು ಕೇಂದ್ರ ಇಂಧನ ಸಚಿವ ಹರ್‌ದೀಪ್‌‌ ಸಿಂಗ್‌ ಪುರಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೆಲೆ ಏರಿಕೆಯಾಗುತ್ತಿದೆ. ನೀವು ತೆರಿಗೆ ಇಳಿಸುತ್ತಿಲ್ಲವೇಕೆ? ಎನ್ನುವುದು ಭಾರತದಲ್ಲಿ ನಾವು ಕೇಳಬಹುದಾದ ಸರಳ ರಾಜಕೀಯ ನಿರೂಪಣೆಯಾಗಿದೆ. ಈ ಕಾರಣದಿಂದ ಪ್ರತಿಭಾರಿ ಬೆಲೆ ಏರಿಕೆಯಾದ ಸಂದರ್ಭ ಅದು ನಮ್ಮ ಬುಡಕ್ಕೆ ನಾವೇ ಕೊಡಲಿ ಹಾಕಿಕೊಳ್ಳುವ ಸ್ಥಿತಿಯನ್ನು ತಂದಿಡುತ್ತದೆ” ಎಂದು ಹೇಳಿದ್ದಾರೆ.

ಹಿಂದುತ್ವ ಎಂದರೆ ಎಡವೂ ಅಲ್ಲ, ಬಲವೂ ಅಲ್ಲ; ಎಲ್ಲವನ್ನು ಒಳಗೊಳ್ಳುವುದು ಇದರ ಸಿದ್ಧಾಂತ :ಆರೆಸ್ಸೆಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ – Vishwanews24

“ನಿನ್ನೆ ಶತಕೋಟಿ ಡೋಸ್‌ ಕೊರೊನಾ ಲಸಿಕೆ ವಿತರಣೆಯ ಗುರಿ ತಲುಪಿದ್ದೇವೆ. ಒಂದು ವರ್ಷ 90 ಕೋಟಿ ಮಂದಿಗೆ ಆಹಾರ ಪೂರೈಸಿದ್ದೇವೆ. ಉಜ್ವಲ ಯೋಜನೆಯನ್ನೂ ನೀಡಿದ್ದೇವೆ. ಕೇಂದ್ರ ಸರ್ಕಾರ ಹಲವು ಕಾರ್ಯಗಳು ಪ್ರತಿ ಲೀಟರ್‌ಗೆ ವಿಧಿಸಿರುವ 32 ರೂ. ತೆರಿಗೆಯಿಂದ ಸಾಧ್ಯವಾಗಿದೆ” ಎಂದಿದ್ದಾರೆ.

“ಬಡವರಿಗಾಗಿ ಮನೆ ನಿರ್ಮಾಣ, ರಸ್ತೆ ನಿರ್ಮಾಣ ಹಾಗೂ ಸಮಾಜ ಕಲ್ಯಾಣ ಯೋಜನೆಗಾಗಿ ತೆರಿಗೆ ಹಣ ಬಳಕೆ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಬೊಮ್ಮಾಯಿ ಖಾಲಿ ಡಬ್ಬಾ, ರಾಜ್ಯವನ್ನು ನರಕ ಮಾಡಿದ್ದಾರೆ : ಸಿದ್ದರಾಮಯ್ಯ – Vishwanews24