ಉಜಿರೆ : ಮಗು ಅಪಹರಣ ಪ್ರಕರಣ : ನಾಲ್ವರು ಆರೋಪಿಗಳು ಪೋಲೀಸ್ ವಶಕ್ಕೆ -Vishwanews24
ಉಜಿರೆ : ಮಗು ಅಪಹರಣ ಪ್ರಕರಣ : ನಾಲ್ವರು ಆರೋಪಿಗಳು ಪೋಲೀಸ್ ವಶಕ್ಕೆ -Vishwanews24
ಬೆಳ್ತಂಗಡಿ: ಉಜಿರೆಯಲ್ಲಿ ಮನೆಮುಂದೆ ಆಟವಾಡುತ್ತಿದ್ದ ಮಗುವಿನ ಅಪಹರಣ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದ್ದು, ಪೊಲೀಸರು ಮಗುವನ್ನು ಸುರಕ್ಷಿತವಾಗಿ ರಕ್ಷಿಸಿ, ನಾಲ್ವರನ್ನು ಬಂಧಿಸಿದ್ದಾರೆ.
ಮಗುವನ್ನು ಕೋಲಾರದಲ್ಲಿ ಪತ್ತೆ ಹಚ್ಚಿ ನಾಲ್ವರು ಅಪಹರಣಕಾರರನ್ನು ಪೊಲೀಸರು ಬಂಧಿಸಿದ್ದಾರೆ.
ಗುರುವಾರದಂದು ಉಜಿರೆಯ ರಥಬೀದಿ ಅಶ್ವತ್ಥ ಕಟ್ಟೆ ಸಮೀಪದ ಮನೆ ಮುಂದೆ ಆಟವಾಡುತ್ತಿದ್ದಅನುಭವ್ (8) ಮಗುವೊಂದನ್ನು ಅಪಹರಣ ನಡೆಸಿದ ದುಷ್ಕರ್ಮಿಗಳು 17 ಕೋ.ರೂ. ಗೆ ಬೇಡಿಕೆಯಿಟ್ಟಿದ್ದು, ಈ ಪ್ರಕರಣ ಸಾಕಷ್ಟು ಆತಂಕ ಸೃಷ್ಟಿಸಿತ್ತು.
ಇನ್ನು ಕೋಲಾರದ ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಹರಣಕಾರರನ್ನು ಮಗುವಿನೊಂದಿಗೆ ವಿಶೇಷ ತಂಡ ಪೊಲೀಸರು ಶನಿವಾರ ಬೆಳಗ್ಗೆ 5 ಗಂಟೆಗೆ ಪತ್ತೆ ಹಚ್ಚಿ, ತಕ್ಷಣ ಅಪಹರಣಕಾರರನ್ನು ಕೋಲಾರ ಪೊಲೀಸ್ ಠಾಣೆಗೆ ಕರೆತರಲಾಯಿತು.
ಇಂದು ಅಪರಾಹ್ನ ಕೋಲಾರ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿ, ನಂತರ ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆತರಲಾಗುತ್ತದೆ ಎನ್ನಲಾಗಿದ್ದು, ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ಉಪನಿರೀಕ್ಷಕ ಬಂದಕುಮಾರ್, ಧರ್ಮಸ್ಥಳ ಠಾಣೆ ಉಪನಿರೀಕ್ಷಕ ಪವನ್ ಕುಮಾರ್ ನೇತೃತ್ವದ ವಿಶೇಷ ತಂಡ ಹಾಜರು ಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
