ಉಡುಪಿ: ಆರೋಪಿ ಪ್ರವೀಣ್ ಚೌಗಲೆಗೆ 14 ದಿನಗಳ ನ್ಯಾಯಾಂಗ ಬಂಧನ ವಿಸ್ತರಣೆ – vishwanews24

Featured, ಉಡುಪಿ

ಉಡುಪಿ: ಆರೋಪಿ ಪ್ರವೀಣ್ ಚೌಗಲೆಗೆ 14 ದಿನಗಳ ನ್ಯಾಯಾಂಗ ಬಂಧನ ವಿಸ್ತರಣೆ

ಉಡುಪಿ : ನೇಜಾರಿನ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದಿದ್ದ ಆರೋಪಿ ಪ್ರವೀಣ್ ಚೌಗುಲೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಉಡುಪಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಆರೋಪಿ ಪ್ರವೀಣ್ ಚೌಗಲೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರಾಗಿದ್ದು, ಆರೋಪಿಗೆ ಡಿಸೆಂಬರ್ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರವೀಣ್ ಚೌಗುಲೆ ನವೆಂಬರ್ 12ರಂದು ನೇಜಾರಿನ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದಿದ್ದ. ಈತನನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ನೇತೃತ್ವದಲ್ಲಿ ನವೆಂಬರ್ 14ರಂದು ಬೆಳಗಾವಿಯಲ್ಲಿ ಬಂಧಿಸಲಾಗಿತ್ತು.

ಉಡುಪಿಯಲ್ಲಿ ಅಗಲಿದ ಅರ್ಜುನನಿಗೆ ಶ್ರದ್ಧಾಂಜಲಿ – vishwanews24

Leave a Reply