ಉಡುಪಿ : ಉಚ್ಚಿಲ ದಸರಾ 2025 : ಪ್ರಥಮ ದಿನ ಸಾಮೂಹಿಕ ಕುಂಕುಮಾರ್ಚನೆ ಸೇವೆ – vishwanews24
ಉಡುಪಿ : ಉಚ್ಚಿಲ ದಸರಾ 2025 : ಪ್ರಥಮ ದಿನ ಸಾಮೂಹಿಕ ಕುಂಕುಮಾರ್ಚನೆ ಸೇವೆ
ಉಚ್ಚಿಲ : ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸೆ. 22ರಿಂದ ಅ. 2ರ ವರೆಗೆ ಜರಗಲಿರುವ ಉಡುಪಿ – ಉಚ್ಚಿಲ ದಸರಾ 2025 ದಲ್ಲಿ ಪ್ರಥಮ ದಿನ (ಸೋಮವಾರ) ಸಂಜೆ ಸಾಮೂಹಿಕ ಕುಂಕುಮಾರ್ಚನೆ ಸೇವೆ ನಡೆಯಿತು.
ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕ ವೇದ ಮೂರ್ತಿ ಕೆ.ವಿ.ರಾಘವೇಂದ್ರ ಉಪಾಧ್ಯಾಯ ಮತ್ತು ಉದಯ ತಂತ್ರಿ ಕಳತ್ತೂರು ಇವರ ನೇತೃತ್ವದಲ್ಲಿ ಸಾಮೂಹಿಕ ಕುಂಕುಮಾರ್ಚನೆ ನಡೆಯಿತು.
ನೂರಾರು ಮಹಿಳೆಯರು ಪೂಜಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು.
ಈ ಸಂದರ್ಭ ದ.ಕ.ಮೊಗವೀರ ಮಹಾಜನ ಸಂಘದ ಸಲಹೆಗಾರ ನಾಡೋಜ ಡಾ. ಜಿ.ಶಂಕರ್,
ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಉಪಾಧ್ಯಕ್ಷರಾದ ಮೋಹನ್ ಬೇಂಗ್ರೆ, ದಿನೇಶ್ ಎರ್ಮಾಳು, ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಕ್ಷೇತ್ರಾಡಳಿಯ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ಉಚ್ಚಿಲ ದಸರಾ ಉತ್ಸವ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಮಹಿಳಾ ಸಂಚಾಲಕಿ ಸಂಧ್ಯಾದೀಪ ಸುನೀಲ್, ನಾರಾಯಣ ಜೆ ಕರ್ಕೇರ, ಶ್ರೀಪತಿ ಭಟ್, ರಾಘವೇಂದ್ರ ಬೈಕಾಡಿ, ಗುಂಡು ಬಿ.ಅಮೀನ್, ದೇವಳದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ಉದ್ಯಮಿ ಸಾಧು ಸಾಲ್ಯಾನ್, ಶ್ರೀಪತಿ ಭಟ್, ಉಷಾ ರಾಣಿ ಬೋಳೂರು, ಮನೋಜ್ ಕಾಂಚನ್, ಸತೀಶ್ ಅಮೀನ್ ಬೆಣ್ಣೆಕುದ್ರು, ಸುಕುಮಾರ್ ಶ್ರೀಯಾನ್, ಶಿವಕುಮಾರ್ ಮೆಂಡನ್, ಸುಗುಣ ಕರ್ಕೇರ ಮತ್ತು ದೇವಳದ ಪ್ರಧಾನ ವ್ಯವಸ್ಥಾಪಕ ಸತೀಶ್ ಅಮೀನ್ ಪಡುಕರೆ ಉಪಸ್ಥಿತರಿದ್ದರು.
