ಉಡುಪಿ: ಉದ್ಯಾವರ ಜಯಲಕ್ಷ್ಮಿ ಸಿಲ್ಕ್ಸ್ ಗೆ ನುಗ್ಗಿದ ಕಳ್ಳರು – ಲಕ್ಷಾಂತರ ರೂ. ದೋಚಿ ಪರಾರಿ – Vishwanews24

Featured, ಉಡುಪಿ

ಉಡುಪಿ: ಉದ್ಯಾವರ ಜಯಲಕ್ಷ್ಮಿ ಸಿಲ್ಕ್ಸ್ ಗೆ ನುಗ್ಗಿದ ಕಳ್ಳರು – ಲಕ್ಷಾಂತರ ರೂ. ದೋಚಿ ಪರಾರಿ

ಉಡುಪಿ : ಉಡುಪಿ ಸಮೀಪದ ಉದ್ಯಾವರದಲ್ಲಿರುವ ಪ್ರಖ್ಯಾತ ಜವಳಿ ಮಳಿಗೆ ಜಯಲಕ್ಷ್ಮಿ ಸಿಲ್ಕ್ಸ್ ಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ದೋಚಿ ಪರಾರಿಯಾಗಿದ್ದಾರೆ.

ರಾತ್ರಿ ವೇಳೆ ಮಳಿಗೆಯ ಹಿಂಭಾಗದಲ್ಲಿರುವ ಶೌಚಾಲಯದ ಕಿಟಕಿ ಒಡೆದು ಒಳನುಗ್ಗಿದ ಕಳ್ಳರು ವ್ಯಾಪರದ ಹಣವನ್ನು ಕದ್ದು ಪರಾರಿಯಾಗಿದ್ದಾರೆ. ಮುಂಜಾನೆ ಎಂದಿನಂತೆ ಅಂಗಡಿ ತೆರೆದ ಸಂಧರ್ಭ ಪ್ರಕರಣ ಬೆಳಕಿಗೆ ಬಂದಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಯಿತು.

ಶ್ವಾನ ದಳದೊಂದಿಗೆ ಪೊಲೀಸರ ತಂಡ ಸ್ಥಳಕ್ಕೆ ಅಗಮಿಸಿದ್ದು ಪರಿಶೀಲನೆ ನಡೆಸಿದೆ. ಕಳ್ಳತನವಾದ ಒಟ್ಟು ಮೌಲ್ಯ ಎಷ್ಟು ಎನ್ನುವುದರ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಾಗಿದ್ದು,ಉನ್ನತ ಮಟ್ಟದ ಅಧಿಕಾರಿಗಳು ಸ್ಥಳದಲ್ಲಿದ್ದು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

5-8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಅನುಮತಿ -Vishwanews24

Leave a Reply