ಉಡುಪಿ: ಕೆ.ರಾಘವೇಂದ್ರ ಕಿಣಿ ಅವರ ನೇತೃತ್ವದಲ್ಲಿ ಮೇ 11ರಂದು ಕಡಿಯಾಳಿ ದೇವಸ್ಥಾನದಲ್ಲಿ ಉಚಿತ ಸಾಮೂಹಿಕ ಉಪನಯನ – Vishwanews24
ಉಡುಪಿ: ಕೆ.ರಾಘವೇಂದ್ರ ಕಿಣಿ ಅವರ ನೇತೃತ್ವದಲ್ಲಿ ಮೇ 11ರಂದು ಕಡಿಯಾಳಿ ದೇವಸ್ಥಾನದಲ್ಲಿ ಉಚಿತ ಸಾಮೂಹಿಕ ಉಪನಯನ
ಉಡುಪಿ : ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರು ಮತ್ತು ಕಡಿಯಾಳಿ ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ರಾಘವೇಂದ್ರ ಕಿಣಿ ಅವರ ನೇತೃತ್ವದಲ್ಲಿ ಮೇ 11ರಂದು ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲದ ಆವರಣದಲ್ಲಿ ಸಾಮೂಹಿಕ ಉಪನಯನ ಆಯೋಜಿಸಲಾಗಿದೆ.

ಈ ಬ್ರಹ್ಮೋಪದೇಶಕ್ಕೆ ತಗಲುವ ಎಲ್ಲಾ ವೆಚ್ಚವು ಸಂಪೂರ್ಣ ಉಚಿತವಾಗಿದ್ದು, ಈ ಕಾರ್ಯಕ್ರಮದಲ್ಲಿ ಉಚಿತ ಉಪನಯನ ಸಂಸ್ಕಾರ ಬಯಸುವ ವಟುಗಳ ಪೋಷಕರು 9008190489 ಈ ಸಂಖ್ಯೆಗೆ ಸಂಪರ್ಕಿಸುವಂತೆ ಸೂಚಿಸಲಾಗಿದೆ. ಹಾಗೂ ಈ ಕಾರ್ಯಕ್ರಮದಲ್ಲಿ ರಾಘವೇಂದ್ರ ಕಿಣಿಯವರ ದ್ವಿತೀಯ ಮಗನಾದ ರಚಿತ್ ಕಿಣಿಗೂ ಉಪನಯನ ನಡೆಯಲಿದ್ದು ಅರ್ಹ ಬಡ ವಟುಗಳಿಗೆ ಅವಕಾಶವಿರುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸರ್ಕಾರಿ ನೌಕರರ ಮುಷ್ಕರ : ರಾಜ್ಯಾಧ್ಯಂತ ಜಿಲ್ಲಾಸ್ಪತ್ರೆಗಳಲ್ಲಿ ಒಪಿಡಿ ಸೇವೆ ಬಂದ್, ರೋಗಿಗಳ ಪರದಾಟ – Vishwanews24
