ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

Featured, ಉಡುಪಿ

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ನಡೆಯಿತು.

ಬ್ರಹ್ಮಗಿರಿಯ ಕಾಂಗ್ರೆಸ್ ಭವನದಿಂದ ನೂರಾರು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳಾದ SIR ಪ್ರಕ್ರಿಯೆ , NEET ಹಗರಣ ಹಾಗೂ ಬೆಲೆ ಏರಿಕೆ ವಿರುದ್ಧ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ:

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಕಾಂಗ್ರೆಸ್ ಭವನದಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಬ್ರಹ್ಮಗಿರಿ ಸರ್ಕಲ್ ಮೂಲಕ ಅಜ್ಜರಕಾಡು ಹುತಾತ್ಮ ಸ್ಮಾರಕ ತನಕ ಸಾಗಿ ಬಂತು.ಅಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು,ಮಾಜಿ ಸಂಸದ ಜಯಪುಕಾಶ್ ಹೆಗ್ಡೆ, ಕರಾವಳಿ ಅಭಿವೃದ್ಧಿ ಮಂಡಳಿಯ ಎಂ ಎ ಗಫೂರ್, ಮಂಜುನಾಥ ಪೂಜಾರಿ ಹೆಬ್ರಿ, ಸತೀಶ್ ಕೊಡವೂರು,ಮುಖಂಡರಾದ ಹರಿಪುಸಾದ್ ರೈ, ಪುಸಾದ್ ಕಾಂಚನ್ ,ರಮೇಶ್ ಕಾಚನ್,ಹರೀಶ್ ಕಿಣಿ, ಕಿಶನ್ ಹೆಗ್ಡೆ, ಸೌರಭ್ ಬಲ್ಲಾಳ್ ಪುಖ್ಯಾತ್ ಶೆಟ್ಟಿ,ಜ್ಯೋತಿ ಹೆಬ್ಬಾ‌ ಮತ್ತಿತರ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾದರು.

Leave a Reply