ಉಡುಪಿ : ಕೊರೊನಾ ಹಿನ್ನೆಲೆ : ಕರಾವಳಿಯಾದ್ಯಂತ ಕ್ರೈಸ್ತ ಬಾಂಧವರಿಂದ ಸರಳ ತೆನೆ ಹಬ್ಬ -Vishwanews24

Featured, ಉಡುಪಿ

ಉಡುಪಿ : ಕೊರೊನಾ ಹಿನ್ನೆಲೆ : ಕರಾವಳಿಯಾದ್ಯಂತ ಕ್ರೈಸ್ತ ಬಾಂಧವರಿಂದ ಸರಳ ತೆನೆ ಹಬ್ಬ -Vishwanews24

ಉಡುಪಿ: ಉಡುಪಿ ಜಿಲ್ಲೆ ಸಹಿತ ಕರಾವಳಿಯ ಕ್ರೈಸ್ತ ಬಾಂಧವರು ಇಂದು ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ತೆನೆ ಹಬ್ಬ ಆಚರಿಸಿಕೊಂಡರು.

ಇಂದು ಕನ್ಯಾಮರಿಯಮ್ಮನವರ ಜನ್ಮದಿನ (ಮೊಂತಿ ಫೆಸ್ಟ್).ಈ ದಿನ ವನ್ನು ಮೊಂತಿ ಫೆಸ್ಟ್ (ತೆನೆ ಹಬ್ಬ) ಆಗಿ ಕ್ರೈಸ್ತ ಬಾಂಧವರು ಆಚರಿಸುತ್ತಾರೆ. ಕೊರೋನಾ ಹಿನ್ನಲೆಯಲ್ಲಿ ಕನ್ಯಾಮರಿಯಮ್ಮನವರ ಮೂರ್ತಿಗೆ ಹೂಗಳ ಸಮರ್ಪಣೆ ಹಾಗೂ ಮೆರವಣಿಗೆಗಳನ್ನು ರದ್ದುಗೊಳಿಸಲಾಗಿತ್ತು.

ಜಿಲ್ಲೆಯ ಎಲ್ಲ ಚರ್ಚುಗಳಲ್ಲಿ ಧರ್ಮಗುರುಗಳು ಮತ್ತು ಬಾಂಧವರು ತಮ್ಮ ಹೊಲಗಳಿಂದ ಆರಿಸಿ ತಂದ ಭತ್ತದ ತೆನೆಯನ್ನು ಆರ್ಶಿವದಿಸಿ ಬಲಿಪೂಜೆಗಳನ್ನು ನೆರವೇರಿಸಿದರು. ಚರ್ಚುಗಳಲ್ಲಿ ಸೀಮಿತ ಸಂಖ್ಯೆಯ ಭಕ್ತರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು.

ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂದನೀಯ ಜೆರಾಲ್ಡ್ ಐಸಾಕ್ ಲೋಬೊ ಉಡುಪಿ ಚರ್ಚ್ ನಲ್ಲಿ ಬಲಿಪೂಜೆಯನ್ನು ನೆರವೇರಿಸಿ ವಿಶೇಷ ಪ್ರಾರ್ಥನೆ ನೆರವೇರಿಸಿದರು.