ಉಡುಪಿ: ಗ್ಯಾಂಗ್ ವಾರ್ ಪ್ರಕರಣ; ಮೂವರು ಆರೋಪಿಗಳ ಬಂಧನ – vishwanews24
ಉಡುಪಿ: ಗ್ಯಾಂಗ್ ವಾರ್ ಪ್ರಕರಣ; ಗರುಡ ಗ್ಯಾಂಗ್ ನ ಮೂವರ ಬಂಧನ
ಉಡುಪಿ: ನಡು ರಸ್ತೆಯಲ್ಲಿ ಎರಡು ತಂಡಗಳ ನಡುವೆ ನಡೆದ ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಉಡುಪಿ ಎಸ್ಪಿ ಡಾ. ಅರುಣ್ ಕೆ ತಿಳಿಸಿದ್ದಾರೆ.
ಗರುಡ ಗ್ಯಾಂಗ್ ಗೆ ಸಂಬಂಧಿಸಿದ ಆಶೀಕ್, ರಾಕೀಬ್ ಎಂಬ ಆರೋಪಿಗಳನ್ನು ಹಾಗೂ ಸಕ್ಲಾನ್ ಎಂಬ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ.
ಮಂಗಳೂರು : ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಪ್ರಕರಣ: ಕಾನೂನು ಎಲ್ಲರಿಗೂ ಒಂದೇ: CM ಸಿದ್ದರಾಮಯ್ಯ – vishwanews24
ಉಡುಪಿ-ಮಣಿಪಾಲ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇ 18ರಂದು ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದಿತ್ತು. ಕಾಪು ಮೂಲದ ಎರಡು ತಂಡಗಳ ಯುವಕರ ನಡುವೆ ಈ ಜಗಳ ನಡೆದಿದ್ದು, ಇವರ ಮಧ್ಯೆ ಕಾರು ಮಾರಾಟಕ್ಕೆ ಸಂಬಂಧಿಸಿದಂತೆ ವಿವಾದವಿತ್ತು ಎನ್ನಲಾಗಿದೆ. ಇನ್ನು ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪುತ್ತೂರು : ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು – vishwanews24
