ಉಡುಪಿ : ಜ.9ರಿಂದ 15 ರವರೆಗೆ ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ – vishwanews24

Featured, ಉಡುಪಿ

ಉಡುಪಿ : ಜ.9ರಿಂದ 15 ರವರೆಗೆ ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

ಉಡುಪಿ : ಪರ್ಯಾಯ ಶ್ರೀಪುತ್ತಿಗೆ ಮಠದ ಆಶ್ರಯದಲ್ಲಿ ನಡೆಯುವ ವಾರ್ಷಿಕ ಸಪ್ತೋತ್ಸವ ಕಾರ್ಯಕ್ರಮ ಜ. 9ರಿಂದ ಪ್ರಾರಂಭಗೊಂಡು 15ರವರೆಗೆ 7 ದಿನಗಳ ಕಾಲ ಅತ್ಯಂತ ವೈಭವದಿಂದ ನಡೆಯಲಿದೆ ಎಂದು ಪುತ್ತಿಗೆ ಮಠ ಪ್ರಕಟಣೆಯಲ್ಲಿ ತಿಳಿಸಿದೆ.

ಮಕರ ಸಂಕ್ರಮಣದ ಸಂದರ್ಭದಂದು ಸುಮಾರು 8 ಶತಮಾನಗಳ ಹಿಂದೆ ಮದ್ವಾಚಾರ್ಯರು ದ್ವಾರಕೆಯಿಂದ ಬಂದ ಬಾಲ ಕೃಷ್ಣನ ಮೂರ್ತಿಯನ್ನು ಭಕ್ತರಿಗಾಗಿ ಉಡುಪಿಯಲ್ಲಿ ಪ್ರತಿಷ್ಠಾಪಿಸಿದ್ದರು ಎಂಬ ಪ್ರತೀತಿ ಇದ್ದು, ಅದರಂತೆ ಅಂದಿನಿಂದ ಒಂದು ವಾರ ಕಾಲ ಸಪ್ತೋತ್ಸವ ನಡೆಯುತ್ತಿದೆ.

ಈ ಬಾರಿಯ ಸಪ್ತೋತ್ಸವದಲ್ಲಿ ಭಾಗವಹಿಸಲು ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥರ ಆಹ್ವಾನದಂತೆ ಆಸ್ಟ್ರೇಲಿಯಾದ ವಿಕ್ಟೋರಿಯಾ ರಾಜ್ಯದಲ್ಲಿ ಸಂಸದರಾಗಿರುವ ಜಾನ್ ಮುಲಾಯ್ ಆಗಮಿಸಲಿದ್ದಾರೆ. ಅಲ್ಲದೇ ಗೌಡೀಯ ಮಾಧ್ವ ಮಠದ ಮಹಾಸ್ವಾಮಿಗಳಾದ ಶ್ರೀಪುಂಡರೀಕ ಗೋಸ್ವಾಮಿ ಭಾಗವಹಿಸಲಿದ್ದಾರೆ ಎಂದು ಪರ್ಯಾಯ ಮಠದ ಪ್ರಕಟಣೆ ತಿಳಿಸಿದೆ.

ಮಂಗಳೂರು: ವೈಯಕ್ತಿಕ ಖಾತೆಯ ಕ್ಯು ಆರ್ ಕೋಡ್  ಬಳಸಿ ಪೆಟ್ರೋಲ್ ಬಂಕ್ ಸೂಪರ್‌ವೈಸರ್‌ನಿಂದ 58.85 ಲಕ್ಷ ರೂ ವಂಚನೆ – vishwanews24

Leave a Reply