ಉಡುಪಿ : ಜಿಲ್ಲೆಯ ಶಾಲೆಗಳಲ್ಲಿ ಕೊರೊನಾ ಪ್ರಕರಣ ಪತ್ತೆಯಾದರೆ ಆಯಾ ತರಗತಿ ಐದು ದಿನ ಬಂದ್‌ : ಜಿಲ್ಲಾಧಿಕಾರಿ ಕೂರ್ಮಾರಾವ್‌ – Vishwanews24

Featured, ಉಡುಪಿ

ಉಡುಪಿ : ಜಿಲ್ಲೆಯ ಶಾಲೆಗಳಲ್ಲಿ ಕೊರೊನಾ ಪ್ರಕರಣ ಪತ್ತೆಯಾದರೆ ಆಯಾ ತರಗತಿ ಐದು ದಿನ ಬಂದ್‌ : ಜಿಲ್ಲಾಧಿಕಾರಿ ಕೂರ್ಮಾರಾವ್‌ – Vishwanews24

ಇಡೀ ಶಾಲೆಯನ್ನು ಬಂದ್‌ ಮಾಡುವ ನಿರ್ಧಾರ ತೆಗೆದುಕೊಂಡಿಲ್ಲ ..

ಉಡುಪಿ: ಜಿಲ್ಲೆಯ ಶಾಲೆಗಳಲ್ಲಿ ಕೊರೊನಾ ಪ್ರಕರಣ ಪತ್ತೆಯಾದರೆ ಆಯಾ ತರಗತಿಯನ್ನು ಐದು ದಿನ ಬಂದ್‌ ಮಾಡುವ ನಿರ್ಧಾರ ಮಾಡಿದ್ದೇವೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಮಾಹಿತಿ ನೀಡಿದ್ದಾರೆ.

ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಸೂಚನೆಯಂತೆ ಮಕ್ಕಳಲ್ಲಿ ಕೊರೊನಾ  ಪತ್ತೆಯಾದರೆ ಆ ತರಗತಿ ಅಥವಾ ಆ ವಿಭಾಗವನ್ನು ಐದು ದಿನ ಬಂದ್‌ ಮಾಡಲಾಗುತ್ತದೆ. ಇಡೀ ಶಾಲೆಯನ್ನು ಬಂದ್‌ ಮಾಡುವ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದರು.

ಸರಕಾರದಿಂದ ಬಂದಿರುವ ನಿರ್ದೇಶನಗಳನ್ನು ಪಾಲನೆ ಮಾಡಲಾಗುತ್ತದೆ. ಜಿಲ್ಲೆಯ ತಜ್ಞರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿ ಗಳ ಜತೆ ಮಾತುಕತೆ ನಡೆಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೂ ಕೆಲವು ನಿರ್ದೇಶನ ನೀಡಿದ್ದೇವೆ ಮತ್ತು ಅವರಿಂದ ವರದಿ ಪಡೆಯುತ್ತಿದ್ದೇವೆ ಎಂದರು.

ಜನರ ಆರೋಗ್ಯದ ದೃಷ್ಟಿ ಹಾಗೂ ಅವರಿಗೆ ತೊಂದರೆ ಅಗಬಾರದೆಂಬ ಉದ್ದೇಶದಿಂದ`ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ’ ತಾತ್ಕಲಿಕ ಸ್ಥಗಿತ :  ಸಿದ್ದರಾಮಯ್ಯ – Vishwanews24

 

Leave a Reply