ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಮಠದ ಅಧಿಕಾರಿ ಕುಸಿದು ಬಿದ್ದು ಮೃತ್ಯು – vishwanews24

Featured, ಉಡುಪಿ

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಮಠದ ಅಧಿಕಾರಿ ಕುಸಿದು ಬಿದ್ದು ಮೃತ್ಯು

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠದ ಅಧಿಕಾರಿ ಅನಂತಕೃಷ್ಣ ಪ್ರಸಾದ (45) ಅವರು ಅ. 7ರಂದು ರಥಬೀದಿಯ ಶ್ರೀ ರಾಘವೇಂದ್ರ ಮಠ ಪರಿಸರದಲ್ಲಿ ಕುಸಿದು ಬಿದ್ದು ನಿಧನ ಹೊಂದಿದರು.

ಮಂಗಳವಾರ ಸಂಜೆ ಶ್ರೀಕೃಷ್ಣನ ದರ್ಶನ ಪಡೆದು ಅನಂತರ ರಥಬೀದಿಯಾಗಿ ಶ್ರೀ ರಾಘವೇಂದ್ರ ಮಠಕ್ಕೆ ಭೇಟಿ ನೀಡಿದ್ದರು. ಮಠದಲ್ಲಿ‌ ರಾಯರ‌ಗುಡಿಗೆ ಸುತ್ತ ಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಕುಸಿದು ಬಿದ್ದ ಇವರು ಸ್ಥಳದಲ್ಲೇ ಮೃತರಾದರು.

ಮೃತರು ತಂದೆ, ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Leave a Reply