ಉಡುಪಿ: ಬಿಜೆಪಿ ಎಸ್ ಟಿ ಮೋರ್ಚಾ ಮತ್ತು ರೈತ ಮೋರ್ಚಾ ಪದಪ್ರದಾನ ಸಮಾರಂಭ -Vishwanews24
ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಎಸ್ ಟಿ ಮೋರ್ಚಾ ಮತ್ತು ರೈತ ಮೋರ್ಚಾ ಪದಪ್ರದಾನ ಸಮಾರಂಭ ನಗರ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ವಹಿಸಿದ್ದರು. ನಗರ ಎಸ್ ಟಿ ಮೋರ್ಚಾದ ನೂತನ ಅಧ್ಯಕ್ಷರಾಗಿ ಅಶೋಕ್ ನಾಯ್ಕ, ಪ್ರಧಾನ ಕಾರ್ಯದರ್ಶಿಯಾಗಿ ಮಂಜು ನಾಯ್ಕ, ಉಪಾಧ್ಯಕ್ಷರುಗಳಾಗಿ ರಾಜೇಶ್ ನಾಯ್ಕ್, ಮಾಧವ ನಾಯ್ಕ, ರೈತ ಮೋರ್ಚಾದ ಅಧ್ಯಕ್ಷರಾಗಿ ರಾಘವೇಂದ್ರ ನಾಯ್ಕ, ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ್ ನಾಯ್ಕ, ಉಪಾಧ್ಯಕ್ಷರುಗಳಾಗಿ ಲತಾ ಎಸ್ . ಶೆಟ್ಟಿ, ಬಾಲಕೃಷ್ಣ ಆಚಾರ್ಯ ಹಾಗೂ ಕಾರ್ಯಕಾರಿಣಿ ಸದಸ್ಯರು ಜವಾಬ್ದಾರಿ ವಹಿಸಿಕೊಂಡರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಎಸ್ ಟಿ ಮೋರ್ಚಾ ಅಧ್ಯಕ್ಷ ನಿತ್ಯಾನಂದ ನಾಯ್ಕ, ನಗರ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ್ ಪೂಜಾರಿ, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು. ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್ ಸ್ವಾಗತಿಸಿದರು. ಮಂಜುನಾಥ್ ಮಣಿಪಾಲ ನಿರೂಪಿಸಿದರು.
