ಉಡುಪಿ : ಬಿಜೆಪಿಯ ಸುಳ್ಳು ಮತ್ತು ಭಾವನಾತ್ಮಕ ಸಂಗತಿಗಳ ಬಗ್ಗೆ ಜನ ಜಾಗೃತಿ ಮೂಡಿಸುವ ಪ್ರಜಾಧ್ವನಿ ಯಾತ್ರೆ ಯಶಸ್ವಿಯಾಗಲಿ :ವಿನಯ ಕುಮಾರ್ ಸೊರಕೆ – Vishwanews24
ಉಡುಪಿ : ಬಿಜೆಪಿಯ ಸುಳ್ಳು ಮತ್ತು ಭಾವನಾತ್ಮಕ ಸಂಗತಿಗಳ ಬಗ್ಗೆ ಜನ ಜಾಗೃತಿ ಮೂಡಿಸುವ ಪ್ರಜಾಧ್ವನಿ ಯಾತ್ರೆ ಯಶಸ್ವಿಯಾಗಲಿ :ವಿನಯ ಕುಮಾರ್ ಸೊರಕೆ
ಉಡುಪಿ : ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡಿ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿದೆ .ಆಳುವ ಬಿಜೆಪಿ ಪಕ್ಷ ಸುಳ್ಳು ಮತ್ತು ಭಾವನಾತ್ಮಕ ಸಂಗತಿಗಳ ಮೂಲಕ ಅಧಿಕಾರವನ್ನು ಹಿಡಿಯುವ ಹುನ್ನಾರದಲ್ಲಿದೆ. ಈ ಬಗ್ಗೆ ಜನ ಸಾಮಾನ್ಯರು ತಮ್ಮ ಸ್ವರವನ್ನು ಎತ್ತ ಬೇಕಾಗಿದೆ. ಹಾಗಾಗಿ ಜನ ಜಾಗೃತಿ ಮೂಡಿಸುವ ಸಲುವಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾದ ಡಿ. ಕೆ. ಶಿವ ಕುಮಾರ್ ಮತ್ತು ವಿರೋಧ ಪಕ್ಷದ ನಾಯಕರಾದ ಶ್ರೀ ಎಸ್. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಹೊರಟ ಪ್ರಜಾಧ್ವನಿ ಯಾತ್ರೆ ಯಶಸ್ವಿಯಾಗಲಿ ಎಂದು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಅವರು ತಾ .22.01.2023 ಭಾನುವಾರ ಬೆಳಿಗ್ಗೆ ಗಂಟೆ 10.00 ಕ್ಕೆ ಉಡುಪಿ ಕ್ರಿಶ್ಚಿಯನ್ ಹೈಸ್ಕೂಲು ಮೈದಾನದಲ್ಲಿ ಜರಗುವ ಪ್ರಜಾಧ್ವನಿ ಯಾತ್ರೆ – ಸಮಾವೇಶದ ಚಪ್ಪರ ನಿರ್ಮಾಣಕ್ಕೆ ಚಾಲನೆ ಕೊಟ್ಟು ನುಡಿದರು.
ವಿಟ್ಲ: ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋದ ಮನೆ :: ಮಹಿಳೆ ಅಪಾಯದಿಂದ ಪಾರು – Vishwanews24
ಈ ಸಂದರ್ಭದಲ್ಲಿ, ಜಿಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು , ಪ್ರಚಾರ ಸಮಿತಿ ಅಧ್ಯಕ್ಷರಾದ ಹರೀಶ್ ಕಿಣಿ ರಾಜ್ಯ ಸಂಯೋಜಕ ರಾದ ದಿನೇಶ್ ಪುತ್ರನ್ ಕಾಂಗ್ರೆಸ್ ನಾಯಕರಾದ ಕೃಷ್ಣಮೂರ್ತಿ ಆಚಾರ್ಯ, ರಮೇಶ್ ಕಾಂಚನ್, ಪ್ರಶಾಂತ್ ಜತ್ತನ್ನ , ಪ್ರಖ್ಯಾತ್ ಶೆಟ್ಟಿ ,ಎಂ.ಎ. ಗಫೂರ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ವೆರೋನಿಕಾ ಕರ್ನೇಲಿಯೋ , ರೋಷನಿ ಒಲಿವರ್, ಡಾ. ಸುನೀತಾ ಶೆಟ್ಟಿ ,ಉದ್ಯಾವರ ನಾಗೇಶ್ ಕುಮಾರ್ ,ಸುಹೇಲ್ ರಹಮತ್, ಶಬರೀಶ್ ಸುವರ್ಣ , ಜಯಸೇರಿಗಾರ್, ಕಾರ್ಕಳ ಮಹಮ್ಮದ್ ಇರ್ಷಾದ್, ಇಸ್ಮಾಯಿಲ್ ಆತ್ರಾಡಿ, ಜಯ ಕುಮಾರ್,ದಿಲೀಪ್ ಹೆಗ್ಡೆ ಕುಕ್ಕೆಹಳ್ಳಿ, ಆನಂದ ಕಿದಿಯೂರು ,ಜೀತೇಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
Join our Whatsapp group by clicking the below link 👇👇
