ಉಡುಪಿ : ಬೆಂಕಿ ಅವಘಡ ಪ್ರಕರಣ : ; ಗಂಭೀರ ಗಾಯಗೊಂಡಿದ್ದ ಉದ್ಯಮಿಯ ಪತ್ನಿಯೂ ಮೃತ್ಯು – vishwanews24 https://wp.me/p9KQap-oNF

Featured, ಉಡುಪಿ

ಉಡುಪಿ : ಬೆಂಕಿ ಅವಘಡ ಪ್ರಕರಣ ; ಗಂಭೀರ ಗಾಯಗೊಂಡಿದ್ದ ಉದ್ಯಮಿಯ ಪತ್ನಿಯೂ ಮೃತ್ಯು

ಉಡುಪಿ :ಅಂಬಲಪಾಡಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಶ್ವಿನಿ ಶೆಟ್ಟಿ (50) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದೇ ಘಟನೆಯಿಂದ ಆಕೆಯ ಪತಿ ರಮಾನಂದ ಶೆಟ್ಟಿ (55) ಜೂನ್ 15 ರಂದು ನಿಧನರಾದರು.

ಜೂನ್ 15 ರಂದು ರಮಾನಂದ ಮತ್ತು ಅಶ್ವಿನಿ ಶೆಟ್ಟಿ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಗೆ ಹೆಚ್ಚಿನ ಹಾನಿ ಮತ್ತು ನಿವಾಸಿಗಳಿಗೆ ಗಾಯಗಳಾಗಿವೆ. ಮೂರು ಅಂತಸ್ತಿನ ಮನೆಯ ಒಳಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನೆಗೆ ನಿಖರವಾದ ಕಾರಣ ಇನ್ನೂ ತಿಳಿದಿಲ್ಲ, ತನಿಖೆಯಲ್ಲಿದೆ.

ಮಣಿಪಾಲ: ಅಪಾರ್ಟ್‌ಮೆಂಟ್‌ನಲ್ಲಿ ಸಿಲುಕಿದ್ದ ಯುವತಿಯ ರಕ್ಷಣೆ – vishwanews24

ಜೂನ್ 15 ರಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿತು. ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸ್ ಇಲಾಖೆ ಮತ್ತು ಸ್ಥಳೀಯರು ಸ್ಥಳಕ್ಕೆ ಧಾವಿಸಿದರು. ಮನೆಯೊಳಗೆ ದಟ್ಟ ಹೊಗೆ ಆವರಿಸಿದ್ದರಿಂದ ಅಗ್ನಿಶಾಮಕ ಸಿಬ್ಬಂದಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕಾರ್ಯಾಚರಣೆ ನಡೆಸಬೇಕಾಯಿತು. ಬಾತ್ ರೂಂನಲ್ಲಿ ಅಡಗಿಕೊಂಡಿದ್ದ ಇಬ್ಬರು ಮಕ್ಕಳನ್ನು ರಕ್ಷಿಸಿದ್ದಾರೆ.

Leave a Reply