ಉಡುಪಿ: ಮತಾಂತರ, ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುವ ದುಸ್ಸಾಹಸ ಬೇಡ: ಪೇಜಾವರ ಶ್ರೀ – Vishwanews24

Featured, ಉಡುಪಿ

ಉಡುಪಿ: ಮತಾಂತರ, ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುವ ದುಸ್ಸಾಹಸ ಬೇಡ: ಪೇಜಾವರ ಶ್ರೀ

ಉಡುಪಿ: ರಾಜ್ಯ ಸರ್ಕಾರವು ಮತಾಂತರ ನಿಷೇಧ ಕಾಯ್ದೆ ಮತ್ತು ಗೋಹತ್ಯಾ ನಿಷೇಧ ಕಾಯ್ದೆ ಹಿಂಪಡೆಯುವ ದುಸ್ಸಾಹಸ ಮಾಡಬಾರದು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಹೇಳಿದ್ದಾರೆ.

ಈ ಬಗ್ಗೆ ವಿಡಿಯೋ ಸಂದೇಶದಲ್ಲಿ ಹೇಳಿರುವ ಅವರು, ಹಿಂದಿನ ಸರ್ಕಾರವು ಸಮಾಜದಲ್ಲಿ ಏರ್ಪಟ್ಟಿದ್ದ ಗೊಂದಲ ಪರಿಹಾರಕ್ಕಾಗಿ ಮತಾಂತರ ನಿಷೇಧ ಕಾಯ್ದೆ ಮತ್ತು ಗೋ ಹತ್ಯಾ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿತ್ತು. ಪ್ರಸ್ತುತ ಸರ್ಕಾರವು ಈ ಎರಡೂ ಕಾಯ್ದೆಯನ್ನು ಹಿಂಪಡೆಯುವ ನಿರ್ಧಾರ ಅತ್ಯಂತ ಕಳವಳಕಾರಿ ವಿಚಾರ ಎಂದರು.

ಸರ್ಕಾರವು ಕಾನೂನು ಹಿಂಪಡೆಯುವ ದುಸ್ಸಾಹಸ ಮಾಡಬಾರದು. ಆ ವಿಷಯದಲ್ಲಿ ಸರ್ಕಾರವು ಜನಪ್ರತಿನಿಧಿಗಳ ಮೂಲಕ ಜನಾಭಿಪ್ರಾಯವನ್ನು ಪಡೆದು ಮುಂದಿನ ಹೆಜ್ಜೆ ಇಡಬೇಕು ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.

ಮಂಗಳೂರು: ಕಾರ್ಯಕ್ರಮಗಳಲ್ಲಿ ಹಾರ, ಹೂಗುಚ್ಛದ ಬದಲು ಪುಸ್ತಕ ನೀಡಿ  : ನೂತನ ಡಿಸಿ ಮುಲ್ಲೈ ಮುಗಿಲನ್ – Vishwanews24

Leave a Reply