ಉಡುಪಿ: ಮಾಜಿ ಶಾಸಕ, ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ ರನ್ನು ಮರೆತುಬಿಟ್ಟಿತೆ ಜಿಲ್ಲಾ ಬಿಜೆಪಿ ..?: vishwanews24
ಉಡುಪಿ: ಮಾಜಿ ಶಾಸಕ, ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ ರನ್ನು ಮರೆತುಬಿಟ್ಟಿತೆ ಜಿಲ್ಲಾ ಬಿಜೆಪಿ.?
ಕೇಂದ್ರ ಮಾಜಿ ಸಚಿವರ ಉಪಸ್ಥಿತಿಯ ಸಭೆಯಲ್ಲಿ ಮೌನಪ್ರಾರ್ಥನೆಯೂ ಸಲ್ಲಿಸದೆ ಸದಸ್ಯತ್ವ ಅಭಿಯಾನ ಸಭೆ ನಡೆಸಿದ ಜಿಲ್ಲಾ ಬಿಜೆಪಿ -ಕಾರ್ಯಕರ್ತರಲ್ಲಿ ಅಸಮಾಧಾನ..
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿಗೆ ನೂತನ ಅಧ್ಯಕ್ಷ ಆಯ್ಕೆಯ ನಂತರ ದಿನದಿಂದ ದಿನಕ್ಕೆ ಗೊಂದಲ ಹಾಗೂ ಅಸಮಾಧಾನ ಕೇಳಿ ಬರುತ್ತಿದ್ದು ಈ ನಡುವೆ ಇಂದು ಮತ್ತೊಂದು ಬೇಸರದ ಸಂಗತಿ ಹೊರಬಿದ್ದಿದೆ.
ಸೋಮವಾರ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸದಸ್ಯತ್ವ ಅಭಿಯಾನದ ಬಗ್ಗೆ ಕೇಂದ್ರದ ಮಾಜಿ ಸಚಿವ ಭಗವಂತ ಖುಬಾ ಅವರ ಉಪಸ್ಥಿತಿಯಲ್ಲಿ ಸಭೆ ನಡೆದಿತ್ತು.
ಕಾರ್ಕಳ:ಮಿನಿ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು – vishwanews24
ಸಭೆ ಆರಂಭಿಸುವ ಮುನ್ನಾ ಕನಿಷ್ಠಪಕ್ಷ ಉಡುಪಿ ಜಿಲ್ಲಾ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷರು ಹಾಗೂ ಮಾಜಿ ಶಾಸಕರು ಆಗಿದ್ದ ಕೀರ್ತಿಶೇಷ ಕೆ .ಲಕ್ಷ್ಮೀನಾರಾಯಣ ಅವರಿಗೆ ಮೌನ ಪ್ರಾರ್ಥನೆ ಸಲ್ಲಿಸುವ ಸೌಜನ್ಯ ತೋರದಿರುವ ಬಗ್ಗೆ ಕಾರ್ಯಕರ್ತರಲ್ಲಿ ಅಸಮಾಧಾನ ಮೂಡಿದೆ.

ಶುಕ್ರವಾರದಂದು ದಿವಂಗತರಾಗಿದ್ದ ಮಾಜಿ ಶಾಸಕ ಕೆ .ಲಕ್ಷ್ಮಿ ನಾರಾಯಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸದೆ ಜಿಲ್ಲಾ ಸಭೆ ನಡೆಸಿದ ಜಿಲ್ಲಾಧ್ಯಕ್ಷರ ನಡೆಯ ಬಗ್ಗೆ ಸಭೆಯಲ್ಲಿದ್ದ ಹಲವರು ಅಸಮಾಧಾನ ವ್ಯಕ್ತಪಡಿಸಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ “ಹಿರಿಯ ನಾಯಕ:- ಸದ್ಯದ ಪರಿಸ್ಥಿತಿಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅನ್ಯ ಪಕ್ಷದವರಿಂದ ನಡೆಸಲ್ಪಡುತ್ತಿದೆ ಅನ್ನಿಸತೊಡಗಿದೆ.ಪಕ್ಷಕ್ಕಾಗಿ ದುಡಿದ ಕೆ.ಲಕ್ಷ್ಮೀನಾರಾಯಣ ಅವರಿಗೆ ಶೃದ್ದಾಂಜಲಿ ಸಭೆ ಕೂಡ ಮಾಡಿಲ್ಲ ಕನಿಷ್ಠ ಪಕ್ಷ ಮೌನ ಪ್ರಾರ್ಥನೆ ಮಾಡಿಯಾದರೂ ಸಭೆ ಆರಂಭಿಸುವುದು ಸೌಜನ್ಯ ಅದು ನಡೆಸಿಲ್ಲ ಅಂದರೆ ವಿಪರ್ಯಾಸವೆಂದರು.
