ಉಡುಪಿ : ಮುಂಬೈಯಿಂದ ಮಗಳ ಮದುವೆ ಕಾರ್ಯಕ್ರಮಕ್ಕೆ ಬಂದ ತಂದೆ ಹೊಟೇಲಿನಲ್ಲಿ ಕಾಲು ಜಾರಿ ಬಿದ್ದು ಮೃತ್ಯು – Vishwanews24

Featured, ಉಡುಪಿ

ಉಡುಪಿ : ಮುಂಬೈಯಿಂದ ಮಗಳ ಮದುವೆ ಕಾರ್ಯಕ್ರಮಕ್ಕೆ ಬಂದ ತಂದೆ ಹೊಟೇಲಿನಲ್ಲಿ ಕಾಲು ಜಾರಿ ಬಿದ್ದು ಮೃತ್ಯು

ಉಡುಪಿ:ಮುಂಬೈಯಿಂದ ಮಗಳ ಮದುವೆ ಕಾರ್ಯಕ್ಕೆಂದು ಬಂದ ವ್ಯಕ್ತಿಯೊಬ್ಬರು ಹೊಟೇಲಿನಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಮೇ 21ರಂದು ರಾತ್ರಿ ವೇಳೆ ಈ ಘಟನೆ ನಡೆದಿದ್ದು ಮೃತ ವ್ಯಕ್ತಿಯನ್ನು ದೊಂಬಿವಿಲಿಯ ರಾಮಕೃಷ್ಣ ಮುದ್ದು ಶೆಟ್ಟಿ (68) ಎಂದು ಗುರುತಿಸಲಾಗಿದೆ.

ಮೇ22ಕ್ಕೆ ಇವರ ಎರಡನೇ ಮಗಳಿಗೆ ಉಡುಪಿ ಶ್ಯಾಮಿಲಿ ಸಭಾಭವನದಲ್ಲಿ ಮದುವೆ ನಿಶ್ಚಯವಾಗಿದ್ದು, ಈ ಸಂದರ್ಭದಲ್ಲಿ ಮೇ19ರಂದು ಇಡೀ ಕುಟುಂಬ ಸಮೇತರಾಗಿ ಬಂದು ಉಡುಪಿಯ ಹೊಟೋಲ್‌ನಲ್ಲಿ ಉಳಿದಿದ್ದರು, ಹೊಟೇಲ್ ರೂಮ್ ಒಳಗಡೆ ನಡೆಯುವಾಗ ಆಕಸ್ಮಿಕವಾಗಿ ತುಂಡಾದ ಕಾಲಿಗೆ ಅಳವಡಿಸಿದ ಬೆಲ್ಟ್ ಜಾರಿ ನೆಲಕ್ಕೆ ಬಿದ್ದಿದರಿಂದ ತಲೆಗೆ ತೀವ್ರವಾಗಿ ಗಾಯಗೊಂಡ ಇವರು ಜಿಲ್ಲಾಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.

ಕರಾವಳಿಯಲ್ಲಿ 61 ದಿನ ಮೀನುಗಾರಿಕೆ ನಿಷೇಧ – Vishwanews24 

ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply