ಉಡುಪಿ : ಯುವತಿಯರನ್ನು ಬಳಸಿ ಹಣಕ್ಕಾಗಿ ಹನಿಟ್ರ್ಯಾಪ್ : ಆರೋಪಿ ಪೊಲೀಸ್ ವಶಕ್ಕೆ – Vishwanews24

Featured, ಉಡುಪಿ

ಉಡುಪಿ : ಯುವತಿಯರನ್ನು ಬಳಸಿ ಹಣಕ್ಕಾಗಿ ಹನಿಟ್ರ್ಯಾಪ್ : ಆರೋಪಿ ಪೊಲೀಸ್ ವಶಕ್ಕೆ – Vishwanews24

ಉಡುಪಿ: ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬೆದರಿಕೆ ಹಾಕುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಶಂಕರ ನಾರಾಯಣ ಪೊಲೀಸರು ಬಂಧಿಸಿದ್ದಾರೆ.

ರಂಜಿತ್ ಎಸ್. ಹೆಂಗವಳ್ಳಿ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.

ರಂಜಿತ್ ಹಣಕ್ಕಾಗಿ ಹನಿಟ್ರ್ಯಾಪ್ ನಡೆಸಿ ಬೆದರಿಕೆ ಹಾಕುತ್ತಿದ್ದನು ಎಂದು ವ್ಯಕ್ತಿಯೊಬ್ಬರು ಶಂಕರನಾರಾಯಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರಂತೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯನ್ನು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು, ಹೆಚ್ಚಿನ ತನಿಖೆಗಾಗಿ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.ಈಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಜನರ ಸೇವೆಯೇ ನಿಜವಾದ ರಾಮ ರಾಜ್ಯ : ಯೋಗಿ ಆದಿತ್ಯನಾಥ್ – Vishwanews24