ಉಡುಪಿ: ರಸ್ತೆ ಅಪಘಾತ – ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು – Vishwanews24

Featured, ಉಡುಪಿ

ಉಡುಪಿ: ರಸ್ತೆ ಅಪಘಾತ – ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು – Vishwanews24

ಉಡುಪಿ: ಉಪ್ಪೂರು ಉಡುಪಿ – ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರುವಿನಲ್ಲಿ ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಅ. 12ರ ಮಂಗಳವಾರ ನಡೆದಿದೆ.

ಮೃತರನ್ನು ಮಂಡ್ಯ ಮೂಲದ ನಾಗರಾಜು (40) ಎಂದು ಗುರುತಿಸಲಾಗಿದೆ. ಚಲಿಸುತಿದ್ದ ಸ್ಕೂಟರಿಗೆ ಕಾರು ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದು ಪರಿಣಾಮ ದ್ವಿಚಕ್ರ ವಾಹನ ಸವಾರ ರಸ್ತೆಗೆ ಉರುಳಿಬಿದ್ದಿದ್ದು, ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.

ರೈಸ್ ಮಿಲ್ ನಲ್ಲಿ ಕೆಲಸ ಮಾಡುತಿದ್ದ ನಾಗರಾಜು ಕೆಲಸದ ನಿಮಿತ್ತ ಸಾಸ್ತಾನ ಕಡೆಗೆ ಸಂಚರಿಸುತ್ತಿದ್ದಾಗ ಘಟನೆ ನಡೆದಿದೆ. ಸ್ಥಳಕ್ಕೆ ಬ್ರಹ್ಮಾವರ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಮೂಡಬಿದಿರೆ : ನೈತಿಕ ಪೊಲೀಸ್ ಗಿರಿಗೆ ಶಾಸಕ ಉಮಾನಾಥ ಕೋಟ್ಯಾನ್ ನೇರ ಬೆಂಬಲ : ಅಭಯಚಂದ್ರ ಜೈನ್ ಆರೋಪ – Vishwanews24