ಉಡುಪಿ : ರಾಜ್ಯದ ಜನರ ಆಶೀರ್ವಾದ ಮತ್ತು ದೇವರ ದಯೆ ಇದ್ದಲ್ಲಿ ಖಂಡಿತವಾಗಿಯೂ ನಾನು ಮುಂದೊಂದು ದಿನ ರಾಜ್ಯದ ಮುಖ್ಯಮಂತ್ರಿ ಆಗುತ್ತೇನೆ : ಉಮೇಶ್ ಕತ್ತಿ – Vishwanews24

Featured, ಉಡುಪಿ

ಉಡುಪಿ : ರಾಜ್ಯದ ಜನರ ಆಶೀರ್ವಾದ ಮತ್ತು ದೇವರ ದಯೆ ಇದ್ದಲ್ಲಿ ಖಂಡಿತವಾಗಿಯೂ ನಾನು ಮುಂದೊಂದು ದಿನ ರಾಜ್ಯದ ಮುಖ್ಯಮಂತ್ರಿ ಆಗುತ್ತೇನೆ : ಉಮೇಶ್ ಕತ್ತಿ – Vishwanews24

ಉಡುಪಿ : ರಾಜ್ಯದ ಜನರ ಆಶೀರ್ವಾದ ಮತ್ತು ದೇವರ ದಯೆ ಇದ್ದಲ್ಲಿ ಖಂಡಿತವಾಗಿಯೂ ನಾನು ಮುಂದೊಂದು ದಿನ ರಾಜ್ಯದ ಮುಖ್ಯಮಂತ್ರಿ ಆಗುತ್ತೇನೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

ಬ್ರಹ್ಮಾವರದ ನೀಲಾವರದಲ್ಲಿ ಶನಿವಾರ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ಆಸೆ ಪಟ್ಟಿಲ್ಲ. ಈಗಾಗಲೇ ಒಂಬತ್ತು ಬಾರಿ ಚುನಾವಣೆಗೆ ನಿಂತು ಗೆಲುವು ಸಾಧಿಸಿದ್ದೇನೆ. ಸದ್ಯ ನನಗೆ 61 ವರ್ಷ ವಯಸ್ಸು. ಆದರೆ ವಯಸ್ಸು 75 ಆದಾಗಲೂ ಯುವಕನಂತೆಯೇ ಹುರುಪಿನಿಂದ ಇರುತ್ತೇನೆ. ಮುಖ್ಯಮಂತ್ರಿ ಸ್ಥಾನ ನಾನು ಕೇಳುವುದಿಲ್ಲ. ದೇವರ ದಯೆ ಮತ್ತು ಜನಾಶೀರ್ವಾದದಿಂದ ಅದು ಒಲಿದು ಬಂದರೆ ಮುಂದೆ ನಾನು ಮುಖ್ಯಮಂತ್ರಿ ಆಗುತ್ತೇನೆ ಎಂದರು.

ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯವಾಗುವುದಕ್ಕೆ ನಾನೆಂದು ಬಿಡುವುದಿಲ್ಲ. ಅನ್ಯಾಯವಾದರೆ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಇಟ್ಟು ಮತ್ತೆ ಹೋರಾಡುತ್ತೇನೆ. ಈ ಹಿಂದೆಯೂ ಅದನ್ನೇ ಮಾಡಿದ್ದೇನೆ ಎಂದವರು ತಿಳಿಸಿದರು.

ಸಿದ್ದರಾಮಯ್ಯ ಸರ್ಕಾರವಿದ್ದ ವೇಳೆ ಆಕಳು, ಹೋರಿ ಮೃತಪಟ್ಟರೆ ಪರಿಹಾರ ನೀಡಲಾಗುತ್ತಿತ್ತು. ಆದರೆ ಎಮ್ಮೆ, ಕೋಣಗಳ ಸಾವಿಗೆ ಯಾವುದೇ ಪರಿಹಾರ ನೀಡದೇ ಇದ್ದಿದ್ದರಿಂದ ಇವುಗಳನ್ನು ಸಾಕುತ್ತಿದ್ದವರಿಗೆ ಅನ್ಯಾಯ ಆಗುತ್ತಿತ್ತು. ಹೀಗಾಗಿ ಪ್ರತ್ಯೇಕ ರಾಜ್ಯ ಬೇಡಿಕೆ ಇಟ್ಟು ಹೋರಾಟದ ಹಾದಿ ತುಳಿದಿದ್ದೆ. ಪ್ರಸ್ತುತ ಇಂತಹ ತಾರತಮ್ಯ ನಿವಾರಣೆಯಾಗಿದೆ ಎಂದು ಉಮೇಶ್ ಕತ್ತಿ ತಿಳಿಸಿದರು.

ಚುನಾವಣೆ ಹೊಸ್ತಿಲಲ್ಲಿ ಉಡುಪಿ ಕಾಂಗ್ರೆಸ್ ಗೆ ಬಿಗ್ ಶಾಕ್ : ರಾಜಿನಾಮೆ ನೀಡಿದ ಕಾಂಗ್ರೆಸ್ ಪ್ರಭಾವಿ ನಾಯಕ ಪ್ರಮೋದ್ ಮಧ್ವರಾಜ್ – Vishwanews24

Leave a Reply