ಉಡುಪಿ: ಶಾಲೆಯಲ್ಲಿ ಜೇನುನೊಣಗಳ ದಾಳಿ; ಆಸ್ಪತ್ರೆಗೆ ಶಾಸಕ ಯಶಪಾಲ್ ಸುವರ್ಣ ಭೇಟಿ – vishwanews24
ಉಡುಪಿ: ಶಾಲೆಯಲ್ಲಿ ಜೇನುನೊಣಗಳ ದಾಳಿ; ಆಸ್ಪತ್ರೆಗೆ ಶಾಸಕ ಯಶಪಾಲ್ ಸುವರ್ಣ ಭೇಟಿ
ಉಡುಪಿ : ವೊಳಕಾಡು ಸರಕಾರಿ ಶಾಲೆಯಲ್ಲಿ ಜೇನುನೊಣಗಳಿಂದ ದಾಳಿಗೊಳಗಾದ ವಿದ್ಯಾರ್ಥಿಗಳಿದ್ದ ಆಸ್ಪತ್ರೆಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.
ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದು, ಶೀಘ್ರವೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ವೈದ್ಯರು ಶಾಸಕರಿಗೆ ತಿಳಿಸಿದರು. ಸಂತ್ರಸ್ತ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಶಾಸಕರು ಅವರು ಘಟನೆಯ ಬಗ್ಗೆ ವಿವರಗಳನ್ನು ಸಂಗ್ರಹಿಸಿದರು ಮತ್ತು ಅಗತ್ಯ ಬೆಂಬಲವನ್ನು ಪೋಷಕರಿಗೆ ಭರವಸೆ ನೀಡಿದರು.
ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ : ಆರೋಪಿಯಿಂದ ಜಾಮೀನಿಗೆ ಅರ್ಜಿ – vishwanews24
ಭೇಟಿ ಸಂದರ್ಭದಲ್ಲಿ ಉಡುಪಿ ನಗರಸಭಾ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಶಾಲಾಭಿವೃದ್ಧಿ ಸಮಿತಿ ಸದಸ್ಯ ನಾಗಭೂಷಣ ಶೇಟ್, ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

