ಉಡುಪಿ: ಶಿವಮೊಗ್ಗದಲ್ಲಿ ಚಾಕು ಇರಿತ ಪ್ರಕರಣ ; ಜಿಲ್ಲೆಯಾದ್ಯಂತ ಹೈಅಲರ್ಟ್ – Vishwanews24

Featured, ಉಡುಪಿ

ಉಡುಪಿ: ಶಿವಮೊಗ್ಗದಲ್ಲಿ ಚಾಕು ಇರಿತ ಪ್ರಕರಣ ; ಜಿಲ್ಲೆಯಾದ್ಯಂತ

ಹೈಅಲರ್ಟ್

ಉಡುಪಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಾಕು ಇರಿತ ಪ್ರಕರಣ ಸಂಬಂಧಿಸಿ ಉಡುಪಿ ಜಿಲ್ಲೆಯಲ್ಲಿ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದು, ಜಿಲ್ಲೆಯಾದ್ಯಂತ ಹೆಚ್ಚುವರಿಯಾಗಿ 20 ಚೆಕ್‌ಪೋಸ್ಟ್‌ ಗಳನ್ನು ತೆರೆಯಲಾಗಿದೆ.

ಜಿಲ್ಲೆಯಲ್ಲಿ ಸಂಚರಿಸುವ ವಾಹನಗಳನ್ನು ತಡೆದು ನಿಲ್ಲಿಸಿ ಮಾಹಿತಿ ಪಡೆಯುವ ಜತೆಗೆ ಮೊಬೈಲ್‌ ಸಂಖ್ಯೆಯನ್ನೂ ನಮೂದಿಸಿ ಕೊಳ್ಳಲಾಗುತ್ತಿದ್ದು, ಎಸ್ಪಿ, ಹೆಚ್ಚು ವರಿ ಪೊಲೀಸ್‌ ವರಿಷ್ಠಾಧಿಕಾರಿ, ಡಿವೈ ಎಸ್ಪಿ, ಇನ್‌ಸ್ಪೆಕ್ಟರ್‌ಗಳು, ಪಿಸಿಗಳು ತಪಾಸಣೆ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.

ಇನ್ನು ಬ್ರಹ್ಮಗಿರಿ ಸರ್ಕಲ್‌ನಲ್ಲಿ ಸಾವರ್ಕರ್‌ ಹಾಗೂ ಸುಭಾಷ್‌ ಚಂದ್ರ ಬೋಸ್‌ ಭಾವಚಿತ್ರಗಳಗೊಂಡ ಫ್ಲೆಕ್ಸ್‌ ಹಾಕಲಾಗಿದ್ದು, ಪೊಲೀಸ್‌ ಭದ್ರತೆ ಒದಗಿಸಲಾಗಿದೆ.

Leave a Reply