ಉಡುಪಿ: ಶ್ರೀ ಕೃಷ್ಣಮಠಕ್ಕೆ ಗೋವಾ ಸಿಎಂ ಡಾ| ಪ್ರಮೋದ್ ಸಾವಂತ್ ಭೇಟಿ – vishwanews24
ಉಡುಪಿ: ಶ್ರೀ ಕೃಷ್ಣಮಠಕ್ಕೆ ಗೋವಾ ಸಿಎಂ ಡಾ| ಪ್ರಮೋದ್ ಸಾವಂತ್ ಭೇಟಿ
ಉಡುಪಿ: ಶ್ರೀ ಕೃಷ್ಣ ಮಠಕ್ಕೆ ಗೋವಾ ಮುಖ್ಯಮಂತ್ರಿ ಡಾ| ಪ್ರಮೋದ್ ಸಾವಂತ್ ಗುರುವಾರ ಭೇಟಿ ನೀಡಿ ಶ್ರೀ ಕೃಷ್ಣ, ಮುಖ್ಯಪ್ರಾಣ ದೇವರ ದರ್ಶನ ಪಡೆದು, ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆಯ ಜತೆಗೆ ಕೋಟಿ ಗೀತಾ ಲೇಖನ ಯಜ್ಞದ ದೀಕ್ಷೆಯನ್ನು ಪಡೆದರು.
ಶಾಸಕರಾದ ಯಶ್ಪಾಲ್ ಸುವರ್ಣ, ಗುರುರಾಜ್ ಗಂಟಿಹೊಳೆ, ಪ್ರಸಾದ್ ನೇತ್ರಾಲಯ ವೈದ್ಯಕೀಯ ನಿರ್ದೇಶಕ ಡಾ| ಕೃಷ್ಣಪ್ರಸಾದ್ ಕೂಡ್ಲು, ಶ್ರೀಮಠದ ದಿವಾನರಾದ ನಾಗರಾಜ ಆಚಾರ್ಯ, ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಉಪಸ್ಥಿತರಿದ್ದರು
