ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿದ ನಟ ವಿಜಯ ರಾಘವೇಂದ್ರ – vishwanews24

Featured, ಉಡುಪಿ

ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿದ ನಟ ವಿಜಯ ರಾಘವೇಂದ್ರ 

ಉಡುಪಿ: ಕನ್ನಡದ ಖ್ಯಾತ ಚಲನಚಿತ್ರ ನಟ ವಿಜಯ ರಾಘವೇಂದ್ರ ಅವರು ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಮಠಕ್ಕೆ ಆಗಮಿಸಿದ ಅವರನ್ನು ಮಠದ ಪರವಾಗಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ದರ್ಶನದ ನಂತರ ಅವರು ಪರ್ಯಾಯ ಶ್ರೀ ವೇದವರ್ಧನತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶ್ರೀಪಾದರು ಅವರಿಗೆ ಅನುಗ್ರಹ ಮಂತ್ರಾಕ್ಷತೆಯನ್ನು ನೀಡಿ ಶುಭ ಹಾರೈಸಿದರು. ಭೇಟಿಯ ಸಂದರ್ಭದಲ್ಲೇ ನಟ ವಿಜಯ ರಾಘವೇಂದ್ರ ಅವರು ಉಡುಪಿ ಶ್ರೀ ಕೃಷ್ಣಮಠದ ಧಾರ್ಮಿಕ ಪರಂಪರೆ ಹಾಗೂ ಸಾಂಸ್ಕೃತಿಕ ಮಹತ್ವವನ್ನು ಶ್ಲಾಘಿಸಿದರು.

ಪಕ್ಕದ ಮನೆಯವರ ಕಿರುಕುಳ ಮತ್ತು ಬೆದರಿಕೆ :  ತಾಯಿ-ಮಗಳು ನೇಣಿಗೆ ಶರಣು – vishwanews24

Leave a Reply