ಉಡುಪಿ: ಸಮಸ್ತ ಮೀನುಗಾರರ ಬೇಡಿಕೆ ಸಮಸ್ಯೆಗಳ ಬಗ್ಗೆ ಧ್ವನಿಯಾಗುವೆ : ಕೋಟ ಶ್ರೀನಿವಾಸ ಪೂಜಾರಿ – Vishwanews24
ಉಡುಪಿ: ಸಮಸ್ತ ಮೀನುಗಾರರ ಬೇಡಿಕೆ ಸಮಸ್ಯೆಗಳ ಬಗ್ಗೆ ಧ್ವನಿಯಾಗುವೆ : ಕೋಟ ಶ್ರೀನಿವಾಸ ಪೂಜಾರಿ
ಉಡುಪಿ: ಕರಾವಳಿ ಜಿಲ್ಲೆಗಳ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುತ್ತಿರುವ ಮೀನುಗಾರಿಕೆಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಸಮಸ್ತ ಮೀನುಗಾರರ ಬೇಡಿಕೆ ಸಮಸ್ಯೆಗಳ ಬಗ್ಗೆ ಧ್ವನಿಯಾಗಿ ಕೇಂದ್ರ ಸರಕಾರದ ಮೂಲಕ ಪರಿಹಾರ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಮಲ್ಪೆ ಮೀನುಗಾರ ಸಂಘದ ಸಭಾಭವನದಲ್ಲಿ ಮಲ್ಪೆಯ ಮೀನುಗಾರ ಮುಖಂಡರು ಹಾಗೂ ಸಂಘದ ಪದಾಧಿಕಾರಿಗಳನ್ನು ಭೇಟಿ ನೀಡಿ ಮತಯಾಚನೆ ಮಾಡಿ ಗೆಲುವಿಗೆ ಸಹಕಾರ ಕೋರಿದರು.
ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತ ; ನವ ವಿವಾಹಿತ ಯುವಕ ಸಾವು – Vishwanews24
ಕರಾವಳಿ ಭಾಗದ ಮೀನುಗಾರರು ನಿರಂತರವಾಗಿ ರಾಷ್ಟ್ರೀಯತೆ, ಹಿಂದುತ್ವ ಹಾಗೂ ದೇಶದ ಸಮಗ್ರ ಅಭಿವೃದ್ಧಿಗಾಗಿ ಸದಾ ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದು, ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸತತ 3ನೇ ಬಾರಿಗೆ ಪ್ರಧಾನಿಯಾಗಿಸುವ ಸಂಕಲ್ಪ ಮಾಡಿದ್ದಾರೆ. ಈ ಹಿಂದೆ ಮೀನುಗಾರಿಕೆ ಸಚಿವನಾಗಿದ್ದಾಗ 60 ಕೋಟಿ ರೂ. ವೆಚ್ಚದಲ್ಲಿ 22 ಸಾವಿರ ಮಹಿಳಾ ಮೀನುಗಾರರ ಸಾಲ ಮನ್ನಾ, ಹಲವು ದಶಕಗಳ ಬೇಡಿಕೆಯಾಗಿದ್ದ ಹೆಜಮಾಡಿ ಮೀನುಗಾರಿಕೆ ಬಂದರು ಅಭಿವೃದ್ಧಿಗೆ 180 ಕೋಟಿ ರೂ. ಮಂಜೂರು ಹಾಗೂ ವಿವಿಧ ಮೀನುಗಾರಿಕೆ ಬಂದರುಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇನೆ ಎಂದರು.
ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ ಹಾಗೂ ಮೀನುಗಾರ ಸಂಘಟನೆಗಳ ಪದಾಧಿಕಾರಿಗಳು, ಮೀನುಗಾರ ಮುಖಂಡರು ಉಪಸ್ಥಿತರಿದ್ದರು.
