ಉಡುಪಿ: ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾ. ಪಂ. ; ಸಾರ್ವಜನಿಕರ ಆಕ್ರೋಶ – vishwanews24
ಉಡುಪಿ: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್
ಹಿರಿಯಡಕ: ಉಡುಪಿ ತಾಲೂಕಿನ 23ನೇ ಬೈರಂಪಳ್ಳಿ ಗ್ರಾಮ ಪಂಚಾಯತ್ ನಲ್ಲಿ ಸಿಬ್ಬಂದಿಗಳಿಲ್ಲದ ಕಾರಣ ಪಂಚಾಯತ್ ಬಾಗಿಲು ಮುಚ್ಚಿದ್ದಾರೆ.
ಡಿ. 19 ರ ಗುರುವಾರ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಕಚೇರಿಯಲ್ಲಿ ಕೆಲಸದ ಒತ್ತಡ, ಮಾನಸಿಕ ಕಿರುಕುಳದಿಂದ ಕಾರ್ಯನಿರ್ವಹಿಸಲು ಸಂಕಷ್ಟವಾಗುತ್ತಿದ್ದು, ಆರೋಗ್ಯದ ದೃಷ್ಟಿಯಿಂದ ರಾಜೀನಾಮೆ ನೀಡುತ್ತಿದ್ದೇವೆ ಎಂದು ಪತ್ರ ಸಲ್ಲಿಸಿದ್ದರು.
ಈ ಬಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷ, ಮೇಲಾಧಿಕಾರಿಗಳಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆ ಜ.1ರ ಬುಧವಾರ ಸಿಬ್ಬಂದಿಗಳು ಗ್ರಾಮ ಪಂಚಾಯತ್ ಕಚೇರಿಗೆ ಹಾಜರಾಗಿಲ್ಲ.
ಸಿಬ್ಬಂದಿಗಳ ರಾಜೀನಾಮೆ ವಿಷಯ ತಿಳಿಯದೆ ತಮ್ಮ ಕೆಲಸಕ್ಕಾಗಿ ಗ್ರಾಮ ಪಂಚಾಯತ್ ಕಚೇರಿಗೆ ಬಂದು ಸಾರ್ವಜನಿಕರು ಬಾಗಿಲಿಗೆ ಬೀಗ ಹಾಕಿರುವುದು ಕಂಡು ವಾಪಸ್ ಹೋಗುವಂತಾಗಿದೆ.
ಯಾವುದೇ ಮಾಹಿತಿ ನೀಡದೆ ಕಚೇರಿ ಬಾಗಿಲು ತೆರೆಯದೆ ಇರುವುದನ್ನು ಕಂಡ ಸಾರ್ವಜನಿಕರು ಪಂಚಾಯತ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯತ್ನಾಳ್, ಜಾರಕಿಹೊಳಿ ತಂಡಕ್ಕೆ ಬ್ರೇಕ್ ಹಾಕಿ: ಅಮಿತ್ ಶಾಗೆ ವಿಜಯೇಂದ್ರ ಮನವಿ – vishwanews24
