ಉಡುಪಿ: ಸ್ಕೂಟರ್-ಟೆಂಪೋ ಅಪಘಾತ: ಯುವಕ ಸಾವು – Vishwanews24
ಉಡುಪಿ: ಟೆಂಪೋಗೆ ಸ್ಕೂಟರ್ ಡಿಕ್ಕಿ : ಯುವಕ ಸ್ಥಳದಲ್ಲೇ ಸಾವು
ಉಡುಪಿ : ಟೆಂಪೊ ಹಾಗೂ ಸ್ಕೂಟರ್ ನಡುವಿನ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಕರಾವಳಿ ಬೈಪಸ್ ನಲ್ಲಿ ವರದಿಯಾಗಿದೆ. ಗಣಪತಿ ಪೈ ಮೃತಪಟ್ಟ ದುರ್ದೈವಿ.
ಗಣಪತಿಯವರು ಕರಾವಳಿ ಬೈಪಸ್ ನಿಂದ ಸಂತೆಕಟ್ಟೆಯತ್ತ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಸ್ಕೂಟರ್ ನಿಯಂತ್ರಣ ಕಳೆದುಕೊಂಡು ಟೆಂಪೋಗೆ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತಂತೆ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು : ಜ್ಯುವೆಲರಿ ಮಾಲೀಕರ ಕೊಲೆ ಪ್ರಕರಣ: ಕಾಸರಗೋಡಿನಲ್ಲಿ ʼಆರೋಪಿ ಅರೆಸ್ಟ್ʼ – Vishwanews24
