ಉಡುಪಿ : ಹಿರಿಯ ಬಿಜೆಪಿ ಮುಖಂಡ, ಹೊಟೇಲ್ ಉದ್ಯಮಿ ಬಿ. ಸುಧಾಕರ್ ಶೆಟ್ಟಿ ನಿಧನ – vishwanews24

Featured, ಉಡುಪಿ

ಉಡುಪಿ : ಹಿರಿಯ ಬಿಜೆಪಿ ಮುಖಂಡ, ಹೊಟೇಲ್ ಉದ್ಯಮಿ ಬಿ. ಸುಧಾಕರ್ ಶೆಟ್ಟಿ ನಿಧನ

ಉಡುಪಿ : ಹಿರಿಯ ಬಿಜೆಪಿ ಮುಖಂಡ, ಹೊಟೇಲ್ ಉದ್ಯಮಿ ಬಿ. ಸುಧಾಕರ್ ಶೆಟ್ಟಿ (72) ಇಂದು ಮುಂಜಾನೆ ಹೃದಯಾಘಾತದಿಂದ ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ ನಿಧನರಾದರು.

ಸುಧಾಕರ್ ಶೆಟ್ಟಿ ಅವರಿಗೆ ಇಂದು ಬೆಳಿಗ್ಗೆ ತೀವ್ರವಾಗಿ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಮನೆಯವರು ಉಡುಪಿಯ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಹಲೋಕ ತ್ಯಜಿಸಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಸರಳ ಸಜ್ಜನಿಕೆ ಸುಧಾಕರ ಶೆಟ್ಟಿಯವರು ಕರಾವಳಿ ಬೈಪಾಸ್ ನಲ್ಲಿರುವ ಶಾರದಾ ಹೊಟೇಲ್ ನ ಮಾಲಕರಾಗಿದ್ದ ಇವರು, ಹಲವು ವರ್ಷಗಳಿಂದ ಹೊಟೇಲ್ ಉದ್ಯಮ ನಡೆಸುತ್ತಿದ್ದರು.

ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಅಭಿಯಾನ – ಠಾಣೆ ಎದುರು ಧರಣಿ ಕುಳಿತ ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ ಪೊಲೀಸ್ ವಶಕ್ಕೆ – vishwanews24

2009ರಿಂದ 2012ರವರೆಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ 1999ರಲ್ಲಿ ಯು.ಆರ್.ಸಭಾಪತಿ ವಿರುದ್ಧ ಅಲ್ಪ ಮತದಿಂದ ಸೋಲು ಕಂಡಿದ್ದರು.

2004ರ ಚುನಾವಣೆಯಲ್ಲಿ ಟಿಕೆಟ್ ಬಿಜೆಪಿಯಿಂದ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಬಿಜೆಪಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಅವರು ಅಲಂಕರಿಸಿದ್ದರು.

ಉಡುಪಿ ನಗರ ಸಭೆಯ ಉಪಾಧ್ಯಕ್ಷರಾಗಿಯೂ ಆಯ್ಕೆಯಾಗಿದ್ದರು.

ಇಂದಿನ ನಟಿಯರು ನಮಗಿಂತ ಹೆಚ್ಚು ಹಣ ದುಡಿಯುತ್ತಾರೆ ಆದರೆ ನಮಗೆ ಅವರಿಗಿಂತ ಹೆಚ್ಚು ಗೌರವ ಸಿಗುತ್ತಿತ್ತು : ನಟಿ ಸುಹಾಸಿನಿ – vishwanews24

Leave a Reply