ಉಡುಪಿ: ಹುತಾತ್ಮ ಯೋಧ ಅನೂಪ್‌ ಪೂಜಾರಿ ಮನೆಗೆ ಖಾದರ್‌, ಸೊರಕೆ ಭೇಟಿ – vishwanews24

Featured, ಉಡುಪಿ

ಉಡುಪಿ: ಹುತಾತ್ಮ ಯೋಧ ಅನೂಪ್‌ ಪೂಜಾರಿ ಮನೆಗೆ ಖಾದರ್‌, ಸೊರಕೆ ಭೇಟಿ

ಕೋಟೇಶ್ವರ: ಸ್ಪೀಕರ್‌ ಯು.ಟಿ.ಖಾದರ್‌ ಹಾಗೂ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಅವರು ಡಿ.27ರಂದು ರಾತ್ರಿ ಬೀಜಾಡಿಯಲ್ಲಿರುವ ಹುತಾತ್ಮ ಯೋಧ ಅನೂಪ್‌ ಪೂಜಾರಿ ಮನೆಗೆ ತೆರಳಿ ಮೃತರ ತಾಯಿ ಚಂದು ಪೂಜಾರಿ, ಪತ್ನಿ ಮಂಜುಶ್ರೀ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭ ಮಾತನಾಡಿದ ಖಾದರ್‌, ಅನೂಪ್‌ ಪೂಜಾರಿ ಬಗ್ಗೆ ಮುಖ್ಯಮಂತ್ರಿಗಳ ಜತೆಗೆ ಮಾತನಾಡಿದ್ದು, ಸರಕಾರದಿಂದ ಒದಗಿಸಬಹುದಾದ ಸವಲತ್ತು ಹಾಗೂ ಪರಿಹಾರ ನೀಡು ವುದಾಗಿ ಹೇಳಿದರು. ಮೃತರ ಪತ್ನಿ ಪದವೀಧರೆಯಾಗಿದ್ದು, ಅವರಿಗೆ ಸರಕಾರ ಕೆಲಸ ಕೊಡಿಸಬೇಕು ಎಂದು ಕುಂದಾಪುರ ಬಿಲ್ಲವ ಸಮಾಜದ ಅಧ್ಯಕ್ಷ ಅಶೋಕ ಪೂಜಾರಿ ಮನವಿ ಮಾಡಿದರು. ಈ ನಿಟ್ಟಿನಲ್ಲಿ ಶ್ರಮಿಸಲಾಗುವುದು ಎಂದು ಖಾದರ್‌  ಹೇಳಿದರು.

ಪುತ್ತೂರು : ಹೊಂಡಕ್ಕೆ ಬಿದ್ದ ಕಾರು ; ಮೂವರ ದುರ್ಮರಣ – vishwanews24

ಮಾಜಿ ಸಚಿವ ವಿನಯಕುಮಾರ ಸೊರಕೆ, ದಿನೇಶ್ ಹೆಗ್ಡೆ ಮೊಳಹಳ್ಳಿ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಒಟ್ಟಾಗಿ ಪ್ರಯತ್ನ ನಡೆಸುವುದಾಗಿ ತಿಳಿಸಿದ ಅವರು, ಹುತಾತ್ಮ ಯೋಧನ ಹೆಸನಲ್ಲಿ ಸ್ಮಾರಕ ನಿರ್ಮಾಣವೂ ಸೇರಿದಂತೆ ಯಾವುದೇ ಕಾರ್ಯಕ್ರಮಗಳನ್ನು ರೂಪಿಸುವುದಿದ್ದರೂ, ಸ್ಥಳೀಯ ಆಡಳಿತ ತೀರ್ಮಾನ ಕೈಗೊಳ್ಳಲಿ ಆ ಬಳಿಕ ಸರ್ಕಾರದಿಂದ ಬೇಕಾದ ಸಹಕಾರ ನೀಡಲು ಬದ್ಧರಿರುವುದಾಗಿ ತಿಳಿಸಿದರು.

ದಿನೇಶ ಶೆಟ್ಟಿ ಮೊಳಹಳ್ಳಿ, ಮಲ್ಯಾಡಿ ಶಿವರಾಮ ಶೆಟ್ಟಿ, ಹರಿಪ್ರಸಾದ್‌ ಶೆಟ್ಟಿ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.

ಸ್ಮಾರಕ ರಚನೆಗೆ ಸಹಕಾರ: ಬೀಜಾಡಿ ಕಡಲ ತೀರದಲ್ಲಿ ಅನೂಪ್‌ ಪೂಜಾರಿ ಅವರ ಸ್ಮಾರಕ ನಿರ್ಮಿಸಲು ಸಹಕಾರ ನೀಡುವುದಾಗಿ ಖಾದರ್‌ ಹೇಳಿದರು.

ಮಂಗಳೂರು : ಆನ್‌ಲೈನ್ ಗೇಮ್ ವಂಚನೆ ; ಯುವಕ ಆತ್ಮಹತ್ಯೆ – vishwanews24

Leave a Reply