ಉದ್ಯಾವರ : ವ್ಯಕ್ತಿಯ ಮೇಲೆ ಹಲ್ಲೆ ; ವಿಪರೀತಕ್ಕೆ ತಿರುಗಿದ ತಮಾಷೆಯ ಮಾತು – vishwanews24
ಉದ್ಯಾವರ : ವ್ಯಕ್ತಿಯ ಮೇಲೆ ಹಲ್ಲೆ ; ವಿಪರೀತಕ್ಕೆ ತಿರುಗಿದ ತಮಾಷೆಯ ಜಗಳ
ಕಾಪು: ಮಕ್ಕಳ ಸ್ಕಾಲರ್ಶಿಪ್ನ ಬಗ್ಗೆ ದಾಖಲಾತಿ ಪಡೆಯಲು ಸೇವಾ ಸಿಂಧು ಕೇಂದ್ರಕ್ಕೆ ಹೋಗಿದ್ದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಘಟನೆ ಉದ್ಯಾವರದಲ್ಲಿ ನಡೆದಿದೆ.
ಉದ್ಯಾವರ ನಿವಾಸಿ ಇಮಾಮ್ ಸಾಹೇಬ್ ಮುಲ್ಲಾ (40) ಹಲ್ಲೆಗೊಳಗಾದ ವ್ಯಕ್ತಿ. ಅವರು ಜ. 28ರಂದು ಸಂಜೆ ತನ್ನ ಪತ್ನಿ ಶೈನಾಜ್ ಬಾನು ಜತೆ ತಮ್ಮ ಮಕ್ಕಳ ಸ್ಕಾಲರ್ಶಿಪ್ ನ ಬಗ್ಗೆ ದಾಖಲಾತಿ ಪಡೆಯಲು ಉದ್ಯಾವರ ಸೇವಾ ಸಿಂಧು ಕೇಂದ್ರಕ್ಕೆ ತೆರಳಿದ್ದರು. ಈ ವೇಳೆ ಅಲ್ಲಿಗೆ ಬಂದಿದ್ದ ಪರಿಚಯದ ಜಾವೇದ್ ಮತ್ತು ಸಿದ್ದು ಕೂಡಾ ಅಲ್ಲಿಗೆ ಬಂದಿದ್ದ ವೇಳೆ ತಮಾಷೆಗೆಂದು ನಡೆದ ಜಗಳ ವಿಪರೀತಕ್ಕೆ ತೆರಳಿತ್ತು.
ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಪ್ರಕರಣ : ಮೃತರ ಕುಟುಂಬಗಳಿಗೆ 25 ಲಕ್ಷ ಪರಿಹಾರ ಘೋಷಿಸಿದ ಸಿಎಂ ಯೋಗಿ – vishwanews24
ಇಮಾಮ್ ಅವರು ಅಂಗಡಿಯ ಹೊರಗಡೆ ಬಂದಾಗ ಜಾವೆದ್ ಮತ್ತು ಸಿದ್ದು ಹೊಡೆದಿದ್ದರು. ಬಳಿಕ ಅಲ್ಲಿಂದ ಮನೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಬೋಳಾರಗುಡ್ಡೆ ತಲುಪಿದಾಗ ಜಾವೆದ್, ಸಿದ್ದು ಹಾಗೂ ಜಾವೇದ್ನ ಸಂಬಂಧಿಕನೋರ್ವ ಹಲ್ಲೆ ನಡೆಸಿ ಬೈಕ್ನಲ್ಲಿ ಪರಾರಿಯಾಗಿದ್ದಾರೆ.
ಉದ್ಯಾವರದ ಸಂಪಿಗೆ ನಗರದಲ್ಲಿರುವ ಜಾವೇದ್ ಮನೆಗೆ ವಿಷಯ ತಿಳಿಸಲು ಹೋದಾಗ ಜಾವೇದ್, ಸಲೀಂ ಹಾಗೂ ಜಾವೇದ್ನ ಸಂಬಂಧಿಕರು ಮೂವರು ಮಹಿಳೆಯರು ಮತ್ತೆ ಹಲ್ಲೆ ನಡೆಸಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. ಗಾಯಾಳು ಇಮಾಮ್ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರು: ಹೈಫೈ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ ; ಇಬ್ಬರು ಅರೆಸ್ಟ್ – vishwanews24
