ಉಪ್ಪಿನಂಗಡಿ: 13 ವರ್ಷದ ಬಾಲಕ ನೇಣು ಬಿಗಿದು ಆತ್ಮಹತ್ಯೆ – Vishwanews24
ಉಪ್ಪಿನಂಗಡಿ: 13 ವರ್ಷದ ಬಾಲಕ ನೇಣು ಬಿಗಿದು ಆತ್ಮಹತ್ಯೆ
ಉಪ್ಪಿನಂಗಡಿ: ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಮೂಲತಃ ಪಂಜದ ಅಳ್ಪೆಬನದ ನಿವಾಸಿ. ದಿ. ರೋಹಿತ್ ಮತ್ತು ರಮ್ಯ ದಂಪತಿಗಳ ಪುತ್ರ ಖಾಸಗಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ನಂದನ್ (13) ಆತ್ಮಹತ್ಯೆ ಮಾಡಿಕೊಂಡ ಬಾಲಕ.
ರೋಹಿತ್ ಕೆಲವರ್ಷಗಳ ಹಿಂದೆ ನಿಧನರಾಗಿದ್ದು, ಪತಿ ನಿಧನ ಬಳಿಕ ರಮ್ಯಾ ತವರು ಉಪ್ಪಿನಂಗಡಿ ದುಗಲಾಡಿಯಲ್ಲೇ ಇದ್ದು ಮಕ್ಕಳು ಅಲ್ಲೇ ಶಾಲೆ ಕಲಿಯುತ್ತಿದ್ದ. ಶುಕ್ರವಾರದಂದು ತನ್ನ ನಾಲ್ವರು ಗೆಳೆಯರೊಂದಿಗೆ ಆಟವಾಡುತ್ತಿದ್ದ ನಂದನ್ ತನ್ನ ಕೆಟ್ಟು ಹೋಗಿದ್ದ ಸೈಕಲ್ ಅನ್ನು ರಿಪೇರಿ ಮಾಡಿಕೊಡಬೇಕೆಂದು ಮನೆಯಲ್ಲಿ ಒತ್ತಾಯಿಸಿದ್ದ.
ಕಾರವಾರ : ಭಾರಿ ಗಾಳಿ ಮಳೆಯಿಂದಾಗಿ ಮೀನುಗಾರಿಕಾ ಬೋಟ್ ಮುಳುಗಡೆ ; ನಾಲ್ವರ ರಕ್ಷಣೆ – Vishwanews24
ಮನೆಯ ಇನ್ವರ್ಟರ್ ರಿಪೇರಿಗೆ ಬಂದಿರುವುದರಿಂದ ಇವತ್ತು ಬೇಡ ನಾಳೆ ಸೈಕಲ್ ರಿಪೇರಿ ಮಾಡಿಕೊಡಲಾಗುವುದೆಂದು ಮನೆಯವರು ತಿಳಿಸಿದ್ದರೆನ್ನಲಾಗಿದೆ. ಇದರಿಂದ ಸಮಾಧಾನ ಹೊಂದಿದ್ದ. ಆದರೆ ಆತ ಸ್ವಲ್ಪ ಹೊತ್ತಿನ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿಕೊಂಡು ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಬೈಂದೂರು: ವಿವಾಹಿತ ಮಹಿಳೆ ಅನ್ಯಧರ್ಮದ ಯುವಕನೊಂದಿಗೆ ಪರಾರಿ – Vishwanews24
