ಉಪ್ಪಿನಂಗಡಿ ಭೀಕರ ಅಪಘಾತ : KSRTC ಬಸ್ ಡಿಕ್ಕಿ ; ತಾಯಿ – ಮಗು ಸ್ಥಳದಲ್ಲೇ  ದಾರುಣ ಸಾವು  – Vishwanews24

Featured, ದಕ್ಷಿಣ ಕನ್ನಡ

ಉಪ್ಪಿನಂಗಡಿ ಭೀಕರ ಅಪಘಾತ : KSRTC ಬಸ್ ಡಿಕ್ಕಿ ; ತಾಯಿ – ಮಗು ಸ್ಥಳದಲ್ಲೇ  ದಾರುಣ ಸಾವು  – Vishwanews24

ಉಪ್ಪಿನಂಗಡಿ: ಅತೀ ವೇಗದಿಂದ ಬಸ್‌ ನಿಲ್ದಾಣದೊಳಗೆ ಬಂದ ಕೆಎಸ್ಸಾರ್ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ತಾಯಿ ಹಾಗೂ ಒಂದು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ ಬಸ್‌ ನಿಲ್ದಾಣದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

ಮೃತರನ್ನು ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಸಿದ್ದೀಕ್ ಎಂಬವರ ಪತ್ನಿ ಶಾಹಿದಾ (25) ಹಾಗೂ ಅವರ ಪುತ್ರ ಶಾಹೀಲ್ ಎಂದು ಗುರುತಿಸಲಾಗಿದೆ.  ಗೇರುಕಟ್ಟೆಯ ತಾಯಿ ಮನೆಗೆ ಬಂದಿದ್ದ ಶಾಹಿದಾ ಮಂಗಳವಾರ ಬೆಳಗ್ಗೆ ಪುತ್ತೂರಿಗೆ ವೈದ್ಯರ ಬಳಿ ತನ್ನ ಮಗನೊಂದಿಗೆ ತೆರಳುತ್ತಿದ್ದರು. ಈ ಸಂದರ್ಭ ಬಸ್ ನಿಲ್ದಾಣಕ್ಕೆ ತಿರುಗುವಲ್ಲೇ ಇರುವ ನಂದಿನಿ ಹಾಲಿನ ಬೂತ್  ಎದುರಿನಿಂದ ಮತ್ತೊಂದು ಕಡೆಗೆ ಶಾಹಿದಾ ಮಗುವಿನೊಂದಿಗೆ ದಾಟುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಘಟನೆಯಲ್ಲಿ ತಾಯಿ ಮತ್ತು ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕಾಗಮಿಸಿದ ಉಪ್ಪಿನಂಗಡಿ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಉಡುಪಿ: ರಸ್ತೆ ಅಪಘಾತ – ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು – Vishwanews24