ಉಳ್ಳಾಲ:  ಕೆಟ್ಟು ನಿಂತಿದ್ದ ಲಾರಿಗೆ ಎರಡು ಸ್ಕೂಟರ್ ಡಿಕ್ಕಿ : ಓರ್ವ ಸವಾರ ಮೃತ್ಯು – Vishwanews24

Featured, ದಕ್ಷಿಣ ಕನ್ನಡ

ಉಳ್ಳಾಲ:  ಕೆಟ್ಟು ನಿಂತಿದ್ದ ಲಾರಿಗೆ ಎರಡು ಸ್ಕೂಟರ್ ಡಿಕ್ಕಿ : ಓರ್ವ ಸವಾರ ಮೃತ್ಯು

ಉಳ್ಳಾಲ: ಕೆಟ್ಟು ನಿಂತಿದ್ದ ಲಾರಿಗೆ ಎರಡು ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸಾವನಪ್ಪಿರುವ ಘಟನೆ ನೇತ್ರಾವತಿ ಸೇತುವೆ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಸೇತುವೆಯಲ್ಲಿ ಗುರುವಾರ ಮುಂಜಾನೆ ಸಂಭವಿಸಿದ ಈ ಅಪಘಾತದಲ್ಲಿ ಅಂಗರಗುಂಡಿಯ ನಿವಾಸಿ ಮುಹಮ್ಮದ್ ನೌಫಾಲ್ (26) ಮೃತಪಟ್ಟಿದ್ದರೆ, ಸಹಸವಾರ ಉಮರ್ ಫಾರೂಕ್ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.

ನೌಫಾಲ್ ಬೈಕಂಪಾಡಿಯ ಎಪಿಎಂಸಿಯಲ್ಲಿ ತರಕಾರಿ ಅಂಗಡಿ ಹೊಂದಿದ್ದರು. ದಿನನಿತ್ಯ ಟೆಂಪೊದಲ್ಲಿ ಕಲ್ಲಾಪಿಗೆ ಬರುವ ನೌಫಾಲ್ ಇಂದು  ಸ್ಕೂಟರಲ್ಲಿ ತರಕಾರಿ ಕೊಂಡೊಯ್ಯಲು ಬಂದಿದ್ದರು ಎನ್ನಲಾಗಿದೆ.

ಉಡುಪಿ: ಯಾಂತ್ರೀಕೃತ ದೋಣಿಗಳಿಗೆ 25,000 ಕಿ.ಲೀ ಡೀಸೆಲ್‌ ಹೆಚ್ಚುವರಿಯಾಗಿ ವಿತರಿಸಲು ಸರ್ಕಾರ ಆದೇಶ – Vishwanews24

ಇಬ್ಬರೂ ಕಲ್ಲಾಪು ಗ್ಲೋಬಲ್ ಮಾರುಕಟ್ಟೆಗೆ ತರಕಾರಿ ವ್ಯಾಪಾರದ ಹಿನ್ನೆಲೆಯಲ್ಲಿ ಪಂಪ್ ವೆಲ್ ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಸಂದರ್ಭ ವೇಳೆ ಈ ಅಪಘಾತ ಸಂಭವಿಸಿದೆ. ಒಂದು ಸ್ಕೂಟರ್ ಢಿಕ್ಕಿ ಹೊಡೆದ ಕೆಲವೇ ನಿಮಿಷಗಳಲ್ಲಿ ಇನ್ನೊಂದು ಸ್ಕೂಟರ್ ಕೂಡ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply