ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ
ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲದ ಮಾರ್ಗತಲೆ ನಿವಾಸಿ ಮೊಹಮ್ಮದ್ ಶಾಕಿರ್ ( 31) ಹಾಗೂ ಮಂಚಿಲ ನಿವಾಸಿ, ಅಶ್ವಕ್ (28)ಬಂಧಿತರು.
ಬಂಧಿತರ ಪೈಕಿ ಶಾಕಿರ್ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದರೆ, ಅಶ್ವಕ್ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದು, ಈತನ ವಿರುದ್ಧ ಈಗಾಗಲೇ ರೌಡಿ ಶೀಟ್ ತೆರೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಶನಿವಾರ ತಡರಾತ್ರಿ ಸುಮಾರು 12.15ರ ಸುಮಾರಿಗೆ ಈ ಇಬ್ಬರು ತೊಕ್ಕೊಟ್ಟಿನಲ್ಲಿ ಬಾರ್ ಒಂದರ ಬಳಿ ಮದ್ಯದ ಅಮಲಿನಲ್ಲಿ ತಲವಾರು ಹಿಡಿದು ಸಾರ್ವಜನಿಕವಾಗಿ ಓಡಾಡಿ, ಜನರಿಗೆ ಬೆದರಿಕೆ ಹಾಕುತ್ತಿದ್ದರು.
ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ತಲವಾರು ಬಳಕೆ ಹಾಗೂ ಸಾರ್ವಜನಿಕರಿಗೆ ಬೆದರಿಕೆ ಹಾಕಿದ ಆರೋಪದಡಿ ಶಸ್ತ್ರಾಸ್ತ್ರ ಕಾಯ್ದೆ ಸೇರಿದಂತೆ ಸಂಬಂಧಿತ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಲಾಗಿದೆ.
