ಉಳ್ಳಾಲ: ಪ್ರೇಮ ವೈಫಲ್ಯ ಶಂಕೆ ; ಯುವಕ ನೇಣುಬಿಗಿದು ಆತ್ಮಹತ್ಯೆ – VIshwanews24

Featured, ದಕ್ಷಿಣ ಕನ್ನಡ

ಉಳ್ಳಾಲ: ಪ್ರೇಮ ವೈಫಲ್ಯ ಶಂಕೆ ; ಯುವಕ ನೇಣುಬಿಗಿದು ಆತ್ಮಹತ್ಯೆ

ಉಳ್ಳಾಲ,: ಯುವಕನೋರ್ವ ಆತ್ಮಹತ್ಯೆ ನಡೆಸಿರುವ ಘಟನೆ ಕುತ್ತಾರು ಸಂತೋಷನಗರ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಕುದ್ಕೋರಿಗುಡ್ಡೆ ನಿವಾಸಿ ದೀಕ್ಷಿತ್ (19) ಆತ್ಮಹತ್ಯೆಗೈದವರು.

ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ಯುವಕ ಒಂಟಿಯಾಗಿದ್ದ ಸಂದರ್ಭ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ದೀಕ್ಷಿತ್ ನಿನ್ನೆಯೂ ಸಂಜೆವರೆಗೆ ಕರ್ತವ್ಯ ನಿರ್ವಹಿಸಿದ್ದರು. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಪ್ರೇಮವೈಫಲ್ಯ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಮೂಲತಃ ಕಂಕನಾಡಿ ಬೈಪಾಸ್ ನ ಕದ್ಕೋರಿ ಗುಡ್ಡೆಯ ದೀಕ್ಷಿತ್ ಕುಟುಂಬ ಕೆಲ ಸಮಯದಿಂದ ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದರು. ದೀಕ್ಷಿತ್ ನಿನ್ನೆ‌ ಸಂಜೆ ತಾಯಿಯೊಂದಿಗೆ ಕುತ್ತಾರಿನ ಸಂಬಂಧಿಕರ ಮನೆಯಲ್ಲಿದ್ದು ಈ ವೇಳೆ ಮನೆಗೆ ಹೋಗಿ ಬರುತ್ತೇನೆಂದು ಓರ್ವನೇ ಸಂತೋಷ್ ನಗರದ ಬಾಡಿಗೆ ಮನೆಗೆ ತೆರಳಿದ್ದನಂತೆ. ಬಳಿಕ ಮನೆಯ ಕೋಣೆಯ ಸಿಲಿಂಗ್ ಫ್ಯಾನಿಗೆ ದೀಕ್ಷಿತ್ ನೇಣು ಬಿಗಿದು ಆತ್ಮ ಹತ್ಯೆಗೈದಿರುವುದು ರಾತ್ರಿ ವೇಳೆ ಕಂಡುಬಂದಿದೆ. ಪ್ರೇಮ ವೈಫಲ್ಯವೇ ಆತ್ಮಹತ್ಯೆಗೆ ಕಾರಣವೆಂದು ಹೇಳಲಾಗುತ್ತಿದೆ.

ಮೃತ ದೀಕ್ಷಿತ್ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದು ತಾಯಿ, ಸಹೋದರನನ್ನು ಅಗಲಿದ್ದಾನೆ.

ಅಧಿಕೃತವಾಗಿ ಕಾಂಗ್ರೆಸ್ ​ ಪಕ್ಷ ಸೇರಿದ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಎಸ್​ ನಾರಾಯಣ್ – Vishwanews24

 

Leave a Reply