ಉಳ್ಳಾಲ:  ಸಮುದ್ರದ ಅಲೆಗಳನ್ನು ತೆಡೆಯಲು ‘ಸೀ ವೇವ್ ಬ್ರೇಕರ್ ಟೆಕ್ನಾಲಜಿ , ಕಡಲ್ಕೊರೆತಕ್ಕೆ 1 ಕಿ.ಮೀ. ವ್ಯಾಪ್ತಿಯಲ್ಲಿ ಶಾಶ್ವತ ಯೋಜನೆ : ಸಿಎಂ ಬೊಮ್ಮಾಯಿ – Vishwanews24

Featured, ದಕ್ಷಿಣ ಕನ್ನಡ

ಉಳ್ಳಾಲ:  ಸಮುದ್ರದ ಅಲೆಗಳನ್ನು ತೆಡೆಯಲು ‘ಸೀ ವೇವ್ ಬ್ರೇಕರ್ ಟೆಕ್ನಾಲಜಿ , ಕಡಲ್ಕೊರೆತಕ್ಕೆ 1 ಕಿ.ಮೀ. ವ್ಯಾಪ್ತಿಯಲ್ಲಿ ಶಾಶ್ವತ ಯೋಜನೆ : ಸಿಎಂ ಬೊಮ್ಮಾಯಿ

ಉಳ್ಳಾಲ: ಕಡಲ ಕೊರೆತ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಕೇಂದ್ರ ಸರ್ಕಾರದ ನೆರವಿನೊಂದಿಗೆ ದೀರ್ಘಕಾಲದ ಯೋಜನೆ ರೂಪಿಸಲಾಗುವುದು ಎಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಿರುವ ಅವರು ಮಂಗಳವಾರ ರಾತ್ರಿ ಉಳ್ಳಾಲದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ನಿರಂತರವಾಗಿ ಕಡಲ ಕೊರೆತ ಆಗುತ್ತಿದೆ. ಉಳ್ಳಾಲದಲ್ಲಿ ಕಳೆದ ಬಾರಿ ಸುಮಾರು 800 ಮೀ ಕಡಲ ಕೊರೆತ ಆಗಿತ್ತು. ಈ ಬಾರಿ 600 ಮೀ ಆಗಿದೆ. ಹೀಗಾಗಿ ಕಡಲ ಕೊರೆತ ಸಮಸ್ಯೆ ಶಾಶ್ವತ ಪರಿಹಾರ ನೀಡುವುದು ಅತ್ಯಂತ ಅವಶ್ಯಕವಾಗಿದೆ ಎಂದರು.

ಸಮುದ್ರದ ಅಲೆಗಳನ್ನು ತೆಡೆಯುವ ನಿಟ್ಟಿನಲ್ಲಿ ಸೀ ವೇವ್ ಬ್ರೇಕರ್ ಟೆಕ್ನಾಲಜಿಯನ್ನು ಇಲ್ಲಿ ಬಳಕೆ ಮಾಡಲು ತೀರ್ಮಾನ ಮಾಡಲಾಗಿದೆ. ಜನರಿಗೆ ಓಡಾಡುವ ವ್ಯವಸ್ಥೆ ಮಾಡಲಾಗುತ್ತಿದೆ. ಸರಿಯಾದ ಕೆಲಸ ಮಾಡುವ ಮೂಲಕ ಕಡಲ ಕೊರೆತ ಸಮಸ್ಯೆ ಶಾಶ್ವತ ಪರಿಹಾರಕ್ಕೆ ನಮ್ಮ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇವೆ ಎಂದರು.

ಭಾರಿ ಮಳೆಯಿಂದ ಸಂಕಷ್ಟಕ್ಕೆ ಈಡಾಗಿರುವವರ ರಕ್ಷಣಾ ಹಾಗೂ ಪರಿಹಾರ ಕಾರ್ಯಗಳಿಗೆ ಹಣದ ಕೊರತೆ ಇಲ್ಲ. ಈಗಾಗಲೇ ನಮ್ಮ ಬಳಿ ರಾಷ್ಟ್ರೀಯ ವಿಪತ್ತು ನಿರ್ವಹಣೆಗಾಗಿ 750 ಕೋಟಿ ರೂಪಾಯಿ ಹಣ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅತಿವೃಷ್ಠಿಯಿಂದ ಹಾನಿಗೊಳಗಾಗಿರುವವರ ರಕ್ಷಣಾ ಕಾರ್ಯಕ್ಕೆ ಈಗಾಗಲೇ ಜಿಲ್ಲಾಧಿಕಾರಿಗಳ‌ ಬಳಿ ಹಣ ಇದೆ. ಯಾವುದೇ ಕೊರತೆ ಆಗದ ರೀತಿಯಲ್ಲಿ ನಾವು ನೋಡಿಕೊಳ್ಳುತ್ತೇವೆ ಎಂದರು.

ಬೈಂದೂರು: ಕಾರಿನ ಜೊತೆಗೆ ವ್ಯಕ್ತಿಯೊಬ್ಬ ಸುಟ್ಟು ಶವವಾಗಿ ಪತ್ತೆ – Vishwanews24

 

Leave a Reply