ಎ.19 ರಂದು ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಉಡುಪಿಗೆ – Vishwanews24
ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ
ಉಡುಪಿ: ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಅವರು ಉಡುಪಿಗೆ ಆಗಮಿಸುತ್ತಿದ್ದಾರೆ. 19 ಏಪ್ರಿಲ್ 2024 ಶುಕ್ರವಾರ ಸಂಜೆ 3:30ಕ್ಕೆ ಸರಿಯಾಗಿ ಉಡುಪಿ ನಗರದ ಹೋಟೆಲ್ ಕಿದಿಯೂರ್ ಮಾಧವ ಕೃಷ್ಣ ಸಭಾಂಗಣದಲ್ಲಿ ಕೂರ್ಮ ಫೌಂಡೇಶನ್ ವತಿಯಿಂದ ಸಂವಾದ ಕಾರ್ಯಕ್ರಮ ನಡೆಯಲಿದೆ.
ಕಳೆದ ಹತ್ತು ವರ್ಷಗಳ ನರೇಂದ್ರ ಮೋದಿ ಅವರ ಆಡಳಿತದಲ್ಲಿ ನಡೆದಿರುವ ವಿದೇಶಾಂಗ ನೀತಿಗಳ ಮತ್ತು ರಾಜ ತಾಂತ್ರಿಕ ಸುಧಾರಣೆಗಳ ಬಗ್ಗೆ ಈ ಸಂವಾದ ನಡೆಯಲಿದ್ದು ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದೆ.
ಉಡುಪಿಯ ಅಧ್ಯಯನಶೀಲ ವಿದ್ಯಾರ್ಥಿಗಳು , ಸಂಪನ್ಮೂಲ ವ್ಯಕ್ತಿಗಳು, ಪ್ರಮುಖ ಉದ್ಯಮಿಗಳು ಚಿಂತಕರು ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಂವಾದದ ಕೊನೆಯಲ್ಲಿ ಸಾರ್ವಜನಿಕರಿಗೆ ಮಾನ್ಯ ಮಂತ್ರಿಗಳ ಜೊತೆ ಪ್ರಶ್ನೋತ್ತರಕ್ಕೆ ಅವಕಾಶವಿದೆ.
