ಎಚ್.ಡಿ. ದೇವೇಗೌಡರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ BJP ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ – vishwanews24

Featured, ರಾಜ್ಯ ನ್ಯೂಸ್

ಎಚ್.ಡಿ. ದೇವೇಗೌಡರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ BJP ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಭೇಟಿಯಾಗಿದ್ದಾರೆ.

ಮೊದಲು ಆರ್.ಟಿ.‌ನಗರದಲ್ಲಿರುವ ಬಸವರಾಜ ಬೊಮ್ಮಾಯಿ ನಿವಾಸದಲ್ಲಿ ಬೊಮ್ಮಾಯಿಯವರನ್ನು ಭೇಟಿ ಮಾಡಿದ ವಿಜಯೇಂದ್ರ, ಬಳಿಕ ಪದ್ಮನಾಭನಗರದಲ್ಲಿರುವ ಎಚ್​.ಡಿ.ದೇವೇಗೌಡರ ನಿವಾಸದಲ್ಲಿ ಮಾಜಿ ಪ್ರಧಾನಿಗಳನ್ನು ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಶಾಸಕ ಎಂ.ಕೃಷ್ಣಪ್ಪ, ಸಿ.ಕೆ.ರಾಮಮೂರ್ತಿ, ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಶಾಸಕ ಡಿ.ಸಿ.ತಮ್ಮಣ್ಣನವರು ಉಪಸ್ಥಿತರಿದ್ದರು.

ಇನ್ನು ”ಕರುನಾಡಿನ ಹೆಮ್ಮೆ, ಗೌರವಾನ್ವಿತ ಮಾಜಿ ಪ್ರಧಾನಿ ಶ್ರೀ ಹೆಚ್‌.ಡಿ. ದೇವೇಗೌಡರನ್ನು ಅವರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆಯಲಾಯಿತು. ಈ ವೇಳೆ ಅವರು ಪ್ರೀತಿಯಿಂದ ಸನ್ಮಾನಿಸಿ ಶುಭ ಹಾರೈಸಿದ್ದು ನನ್ನ ರಾಜಕೀಯ ಜೀವನದ ಅವಿಸ್ಮರಣಿಯ ಕ್ಷಣವಾಗಿಸಿತು. ಈ ಹೊತ್ತಿಗೂ ಸ್ಫೂರ್ತಿಯ ಚಿಲುಮೆ ಯಾಗಿರುವ ಅವರ ‘ಹೋರಾಟದ ಛಲ – ಆತ್ಮಸ್ಥೈರ್ಯದ ಬಲ’ ನನ್ನಂಥವರಿಗೆ ಸದಾ ಪ್ರೇರಣಾ ಶಕ್ತಿಯಾಗಿದೆ” ಎಂದು ದೇವೇಗೌಡರ ಭೇಟಿ ಬಗ್ಗೆ ವಿಜಯೇಂದ್ರ ಅವರು ಟ್ವಟರ್ ನಲ್ಲಿ ಬರೆದುಕೊಂಡಿದ್ದಾರೆ.

Leave a Reply